ಬೆಂಗಳೂರು : ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದಕ್ಕಿಂತ ಈ ಬಾರಿ ಅತ್ಯುತ್ತಮವಾಗಿ ಮಾಡಲಾಗಿದೆ. ಅಲ್ಲದೆ ಒಂದೂವರೆ ಸಾವಿರ ಡ್ರೋನ್ಗಳ ಪ್ರದರ್ಶನ ವ್ಯವಸ್ಥೆ ಮಾಡಲಾಗಿದೆ ಎಂದರು. ಜನರು ಹೆಚ್ಚು ಸಂಖ್ಯೆಯಲ್ಲಿ ಭೇಟಿ ನೀಡಿ ದೀಪಾಲಂಕಾರ ಕಣ್ತುಂಬಿಕೊಳ್ಳುವಂತೆ ಡಿಸಿಎಂ ಡಿಕೆಶಿ ಕರೆ ನೀಡಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಬಣ್ಣ ಬಣ್ಣದ ದೀಪಾಲಂಕಾರದಿಂದ ಅರಮನೆ ಕಂಗೊಳಿಸುತ್ತಿದ್ದು, ಮುಂದಿನ 12 ದಿನ ದೀಪಾಲಂಕಾರ ಕಣ್ತುಂಬಿಕೊಳ್ಳುವ ಸದಾವಕಾಶ ಜನರಿಗೆ ದೊರೆತಿದೆ.

