ನವದೆಹಲಿ: ಎರಡು ದಶಕಗಳ ನಂತರ ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದ್ದು, ಈ ಐತಿಹಾಸಿಕ ಸಂದರ್ಭವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಇದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಅ ವರ “ಶಾಂತಿ ಪ್ರಯತ್ನ” ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ “ದೃಢ ಸಂಕಲ್ಪ” ಎಂದು ಶ್ಲಾಘಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “20 ವರ್ಷಗಳಿಂದ ಸೆರೆಯಲ್ಲಿದ್ದ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ ಅವರ ಕುಟುಂಬಸ್ಥರ ಧೈರ್ಯ ಹಾಗೂ ಟ್ರಂಪ್ರ ಶಾಂತಿ ಪ್ರಯತ್ನ ಮತ್ತು ನೆತನ್ಯಾಹು ಅವರ ದೃಢ ಸಂಕಲ್ಪಕ್ಕೆ ಸಿಕ್ಕ ಗೌರವ. ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಗಾಗಿ ಟ್ರಂಪ್ ಕೈಗೊಂಡ ಪ್ರಾಮಾಣಿಕ ಪ್ರಯತ್ನಗಳಿಗೆ ಭಾರತ ಬೆಂಬಲಿಸುತ್ತದೆ” ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು, ಹಮಾಸ್ ಬಂಧನದಲ್ಲಿದ್ದ ಉಳಿದ 20 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ದೃಢಪಡಿಸಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಿಂದ ಇಸ್ರೇಲ್-ಹಮಾಸ್ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ಒತ್ತೆಯಾಳುಗಳ ಬಿಡುಗಡೆಯ ನಂತರ, ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಬೀದಿಗಳಲ್ಲಿ ಜನರ ಸಂಭ್ರಮಾಚರಣೆ ಕಂಡುಬಂದಿದೆ.
2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ್ದ ಭಯೋತ್ಪಾದಕ ದಾಳಿ ಹಾಗೂ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಸಂಭವಿಸಿದ ಜೀವಹಾನಿಯನ್ನು ಭಾರತ ತೀವ್ರವಾಗಿ ಖಂಡಿಸಿತ್ತು. “ಒತ್ತೆಯಾಳುಗಳ ಬಿಡುಗಡೆ, ಯುದ್ಧ ವಿರಾಮ ಹಾಗೂ ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಶಾಂತಿಯುತ ಪರಿಹಾರಕ್ಕೆ ಭಾರತ ನಿರಂತರವಾಗಿ ಒತ್ತಾಯಿಸಿತ್ತು,” ಎಂದು ಭಾರತದ ವಿದೇಶಾಂಗ ಇಲಾಖೆ ಹೇಳಿದೆ.

