ಬೆಂಗಳೂರು: ಲೈಂಗಿಕ ದೌಜರ್ನ್ಯ, ರೇಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ 6 ದಿನದ ಮಟ್ಟಿಗೆ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ.
ಸದ್ಯ ಪ್ರಜ್ವಲ್ ರೇವಣ್ಣರನ್ನು ಸಿಐಡಿ ಕಚೇರಿಯಲ್ಲಿ ಇರಿಸಿಕೊಂಡಿರುವ ಎಸ್ಐಟಿ, ವಿಚಾರಣೆ ಶುರು ಮಾಡಿದೆ. ಮುಂದೆ ನಡೆಯುವ ಬೆಳವಣಿಗೆಗಳು ಕುತೂಹಲ ಕೆರಳಿಸಿದೆ. ಈ ನಡುವೆ ಪ್ರಕರಣ ತನಿಖಾ ಹಂತದಲ್ಲಿದ್ದು, ಯಾವುದೇ ರೀತಿ ನಕಾರಾತ್ಮಕ ಪ್ರಚಾರ ಮಾಡ್ಬೇಡಿ ಎಂದು ಪ್ರಜ್ವಲ್ ಪರ ವಕೀಲರು ಮಾಧ್ಯಮದವರನ್ನು ಕೋರಿದರು. ಇದನ್ನೂ ಓದಿ: ಭಾರತಕ್ಕೆ ಮರಳಿ ಭಾರತಕ್ಕೆ ಬಂತು 100 ಟನ್ ಚಿನ್ನ! ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ
ವಿಚಾರಣೆ ಸಂದರ್ಭದಲ್ಲಿ ಜಡ್ಜ್ ಮುಂದೆ ಪ್ರಜ್ವಲ್ ನನಗೆ ಕೊಟ್ಟಿರುವ ರೂಂ ಸರಿಯಿಲ್ಲ. ಕೆಟ್ಟ ವಾಸನೆ ಬರುತ್ತಿದ್ದು ಉಸಿರಾಟಕ್ಕೆ ತೊಂದರೆ ಆಗುತ್ತಿದೆ. ಇಲ್ಲಿ ಇರುವುದಕ್ಕೆ ಆಗುತ್ತಿಲ್ಲ, ನನಗೆ ಹಿಂಸೆ ಆಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: 6 ದಿನ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿಗೆ
ಎಸ್ಐಟಿಯಿಂದ ನನಗೆ ಬೇರೆ ಟಾರ್ಚರ್ ಇಲ್ಲ, ಆದರೆ ದಿನ ಮೀಡಿಯಾ ಟ್ರಯಲ್ ನಡೆಯುತ್ತಿದೆ. ನನ್ನನ್ನ ಕ್ರಿಮಿನಲ್ ರೀತಿ ಬಿಂಬಿಸುತ್ತಿದ್ದಾರೆ. ಫಲಿತಾಂಶ ನೋಡಲು ಅವಕಾಶ ಕಲ್ಪಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ವೆಗಾ ಸಿಟಿ ಮಾಲ್ನಿಂದ ಜಿಗಿದು ಯುವಕ ಆತ್ಮಹತ್ಯೆ