ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ಅವರು ಸಮಯ ಕೇಳಿದ್ದರು. ಆದರೆ ಕೇಳಿದಂತೆ ಸಮಯ ಕೊಡಲು ಆಗುವುದದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ (G̤ Parameshwar) ಅವರು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್ ವಕೀಲರ ಮುಲಕ ಒಂದು ವಾರ ಸಮಯ ಕೇಳಿದ್ದಾರೆ. ಆದರೆ ಹಾಗೆ ಸಮಯವನ್ನು ತೆಗೆದುಕೊಳ್ಳಲು ಆಗುವುದಿಲ್ಲ. ಸೆಕ್ಷನ್ 41 (ಎ) ನಲ್ಲಿ ಸಮಯವನ್ನ ಕೊಡಲು ಬರುವುದಿಲ್ಲ ಎಂದು ಅವರು ಹೇಳಿದ್ದಾರೆ . ಇದನ್ನೂ ಓದಿ: ಹಾಸ್ಟೆಲ್ನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ
SIT ನೋಟಿಸ್ ನೀಡಿದ್ದಾರೆ. ರೇವಣ್ಣ ಇಂದು ವಿಚಾರಣೆಗೆ ಹಾಜಾರಾಗುವುದಾಗಿ ಹೇಳಿದ್ದಾರೆ. ಇನ್ನು ಸಿಎಂ ಕೂಡ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಘಟನೆಯ ಬಗ್ಗೆ ವಿವರಿಸಿ, ಡಿಪ್ಲಾಮೆಟಿಕ್ ಪಾಸ್ ಪೋರ್ಟ್ ರದ್ದು ಮಾಡಿ ಆದಷ್ಟು ಬೇಗ ಕರೆದುಕೊಂಡು ಬರೋದಕ್ಕೆ ಸಹಕರಿಸಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ತಮಿಳು ಹಿರಿಯ ಗಾಯಕಿ ಉಮಾ ರಮಣನ್ ನಿಧನ

