ಕನ್ನಡ ನಾಡು ಎಂದರೆ ಹೆಣ್ಣು ಮಕ್ಕಳಿಗೆ ಅತಿಹೆಚ್ಚು ಗೌರವ ನೀಡುವ ರಾಜ್ಯ. ಭಾರತದ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಹೆಣ್ಣುಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಶತ ಶತಮಾನದಿಂದ ಕೂಡ ಮಾದರಿ ಆಗಿದೆ. ಅದರಲ್ಲೂ ಇಡೀ ಭಾರತದಲ್ಲೇ ಮೊದಲನೇ ಬಾರಿಗೆ ಹೆಣ್ಣು ಮಕ್ಕಳಿಗೆ ಮತದಾನದ ಹಕ್ಕು ನೀಡಿದ್ದು ನಮ್ಮ ಕರ್ನಾಟಕದಲ್ಲಿ. ಹೀಗಿದ್ದರೂ ಇದೇ ಹೆಣ್ಣು ಮಕ್ಕಳ ಮೇಲೆ ಇದೀಗ ನಮ್ಮದೇ ಕರ್ನಾಟಕ ರಾಜ್ಯದಲ್ಲಿ ದೌರ್ಜನ್ಯ ಎಸಗಿ, ಅಶ್ಲೀಲ ವಿಡಿಯೋಗಳನ್ನು ಶೂಟಿಂಗ್ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಅದು ಬೇರೆ ಯಾರು ಅಲ್ಲ ದಳಪತಿಗಳೆಂದೆ ಕರೆಸಿಕೊಳ್ಳುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮೊಮ್ಮಗ ಪ್ರಜ್ವಲ್ ರೇವಣ್ಣ. ಈಗಿನ ಕಾಲದಲ್ಲಿ ಯಾರನ್ನ ನಂಬಬೇಕು, ಯಾರನ್ನ ನಂಬಬಾರದು ಅನ್ನೋದು ಗೊತ್ತಾಗಲ್ಲ. ಒಳ್ಳೆವರು ಅಂದುಕೊಂಡು ಹೋದರೆ ಮಣ್ಣು ಮುಕ್ಕಬೇಕು ಅನ್ನೋದಕ್ಕೆ ಉದಾಹರಣೆ ಇವರೇ ಅಂತ ಸಾಕಷ್ಟು ಜನರ ಹೇಳುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರೋ ಆರೋಪ ಎಷ್ಟರ ಮಟ್ಟಿಗೆ ನಿಜಾನೋ, ಸುಳ್ಳೋ ಗೊತ್ತಿಲ್ಲ. ಆದರೆ ಸ್ತ್ರೀಯರನ್ನ ಪೂಜೆಸುವ ಈ ನೆಲದಲ್ಲಿ ಇಂತಹ ಸುದ್ದಿಗಳು ಬೆಳಕಿಗೆ ಬಂದಿರೋದು ನಿಜಕ್ಕೂ ದುರಾದೃಷ್ಟಕರ ಸಂಗತಿ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುವ ಸಂದರ್ಭದಲ್ಲಿ ಈ ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ಆದರೆ ಇಲ್ಲಿ ವಿಪರ್ಯಾಸ ಏನಂದರೆ ಇಷ್ಟು ದೊಡ್ಡ ಸುದ್ದಿಯಾಗಿ, ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದರೂ ಪ್ರಜ್ವಲ್ ರೇವಣ್ಣ ತಪ್ಪ ಮಾಡಿರು ಹಾಗೆ ಬೇರೆ ದೇಶದಲ್ಲಿ ಹೋಗಿ ಕೂತಿರೋದು. ಅದು ಅಲ್ಲದೆ ಸುದ್ದಿ ಹೆಚ್ಚು ಪ್ರಚಾರ ಆಗುತ್ತಿದ್ದಂತೆ ಅವರು ಜರ್ಮನಿಯ ಫ್ರಾಂಕ್ ಫಟ್ ಗೇ ಹೋಗಿದ್ದಾರೆ ಅಂದ್ರೆ ನಿಜಕ್ಕೂ ಇದು ಬೇಸರ ಸಂಗತಿ. ಈಗ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ರಸ್ತೆಗಳಲ್ಲಿ ಹೋರಾಟ ಮಾಡುತ್ತಾ, ಪ್ರಜ್ವಲ್ ಪ್ರತಿಕೃತಿ ದಹಸಿ, ಚಪ್ಪಲಿ ಹಾರ ಹಾಕಿ, ಛೀ, ಥೂ ಎಂದು ಉಗಿಯುತ್ತಿದ್ದಾರೆ. ಇನ್ನು ಈ ಕುರಿತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಆ ಪತ್ರದ ಮನವಿಗೆ ಓಗೊಟ್ಟು ಸಿಎಂ ಸಿದ್ದರಾಮಯ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದೆ.
ಎಸ್ಐಟಿ ತನಿಖೆಗೆ ಕೋರಿದ್ದ ಮಹಿಳಾ ಆಯೋಗ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಕಳೆದ ಗುರುವಾರ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ”ಜನಸಾಮಾನ್ಯರನ್ನು ತಲುಪಿರುವ ಪೆನ್ಡ್ರೆ?ವ್ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ತುಣುಕುಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೊ?ಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿಎಸ್ಐಟಿ ತನಿಖೆ ನಡೆಸಬೇಕು” ಎಂದು ಕೋರಿದ್ದರು. ಅದರೊದಿಗೆ ಹಲವು ಜನಪರ ಹಾಗೂ ಮಹಿಳಾ ಪರ ಸಂಘಟನೆಗಳು ಈ ಸಂಬAಧ ತನಿಖೆ ನಡೆಸುವಂತೆ ಸರಕಾರವನ್ನು ಆಗ್ರಹಿಸಿದ್ದವು.
ಮಹಿಳಾ ಆಯೋಗದ ಮನವಿಯಲ್ಲೆನಿತ್ತು?
”ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್ಡ್ರೆವ್ಗಳಲ್ಲಿ ಅಮಾಯಕ ಮಹಿಳೆಯರನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು ಮೊಬೈಲ್ನಲ್ಲಿ ಖಾಸಗಿ ವಿಡಿಯೋ ಚಿತ್ರಿ?ಕರಿಸಿಕೊಂಡು ಬ್ಲಾಕ್ಮೇಲ್ ಮಾಡುತ್ತಿರುವ ಬಗ್ಗೆ ವರದಿಯಾಗಿದೆ. ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಹಾಗೂ ಕೆಲವರ ಮೇಲೆ ಅತ್ಯಾಚಾರ ಮಾಡುತ್ತಿರುವ ತುಣಕುಗಳಿರುವ ಪೆನ್ಡ್ರೆವ್ಗಳು ಈಗ ಜನಸಾಮಾನ್ಯರ ಕೈಗೆ ಸಿಕ್ಕಿ ಇಡೀ ಸಮಾಜ ತಲೆತಗ್ಗಿಸುವ ಸ್ಥಿತಿ ನಿರ್ಮಾಣವಾಗಿದ್ದು, ಮಹಿಳೆಯರ ಘನತೆ ನಾಶ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ಹಲವು ಸಂಘಟನೆಗಳಿಂದ ಆಯೋಗಕ್ಕೆ ಮನವಿ ಸ್ವಿಕೃತವಾಗಿವೆ. ಹಲವು ಮಹಿಳೆಯರನ್ನು ಬಲವಂತದಿAದ ಲೈಂಗಿಕ ಕ್ರಿಯೆಗೆ ಒತ್ತಾಯಪಡಿಸುವ ಮೂಲಕ ಚಿತ್ರಿಕರಿಸಲಾಗಿದ್ದು, ಚಿತ್ರಿಕರಣ ಮಾಡಿದ ವ್ಯಕ್ತಿ ಮತ್ತು ಅದನ್ನು ಸಾರ್ವಜನಿಕಗೊಳಿಸದ ವ್ಯಕ್ತಿಯನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆಗೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರ ಪತ್ತೆಹಚ್ಚಲು ಎಸ್ಐಟಿ ರಚನೆ ಮಾಡಬೇಕು” ಎಂದು ಉಲ್ಲೇಖಿಸಲಾಗಿದೆ.
ಬಿ.ಕೆ ಸಿಂಗ್ ನೇತೃತ್ವದ ಎಐಟಿ ತನಿಖೆ?
ಹಾಸನದಲ್ಲಿನ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣ ಸಂಬಂಧ ತನಿಖೆಗೆ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ನ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಎಐಟಿ ತಂಡ ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ವರದಿ ನೀಡುವಂತೆ ಸೂಚನೆ ನೀಡಿದೆ. ಈ ಹಿಂದೆ ಗೌರಿ ಲಂಕೇಶ್ ಕೇಸ್ನಲ್ಲಿ ದೊಡ್ಡ ಪಾತ್ರ ವಹಿಸಿದ್ದ ಬಿ.ಕೆ ಸಿಂಗ್ ಜೊತೆ ಮೂವರು SP, 4 ಡಿವೈಎಸ್ಪಿ ಕೂಡ ಎಐಟಿ ತಂಡದಲ್ಲಿದ್ದಾರೆ.
ಹೇಗಿರುತ್ತೆ ಎಐಟಿ ತನಿಖೆ?
ಸಂತ್ರಸ್ತ ಮಹಿಳೆಯರನ್ನ ಸಂಪರ್ಕಿಸಲಿರುವ SIT ತಂಡ
ಪ್ರಕರಣದ ಬಗ್ಗೆ ಸಂತ್ರಸ್ತರಿಂದ ಹೇಳಿಕೆ ದಾಖಲಿಸಲಾಗುತ್ತೆ
ಬಳಿಕ ಸಂತ್ರಸ್ತೆಯರನ್ನ ಕೋರ್ಟ್ಗೆ ಕರೆಸಿ ಹೇಳಿಕೆ ದಾಖಲು
ಸಂತ್ರಸ್ತೆಯರನ್ನ ಕರೆದೊಯ್ದು ಸ್ಥಳ ಮಹಜರು ನಡೆಸಲಾಗುತ್ತದೆ
ಬಳಿಕ ಎಲ್ಲಾ ಸಾಕ್ಷ್ಯಾಧಾರಗಳನ್ನ ಸಂಗ್ರಹ ಮಾಡಲಾಗುತ್ತದೆ
ರೆಕಾರ್ಡ್ ಮಾಡಿರುವ ಮೊಬೈಲ್ ವಶಕ್ಕೆ ಪಡೆಯಲಿದ್ದಾರೆ
ಮೊಬೈಲ್ ವಿಡಿಯೋಗಳನ್ನ FSL ರವಾನಿಸಲಾಗುತ್ತದೆ
FSLನಲ್ಲಿ ವಿಡಿಯೋ ಅಸಲೀಯತ್ತಿನ ಬಗ್ಗೆ ಪರೀಕ್ಷಿಸಲಾಗುತ್ತೆ
ಹೇಳಿಕೆ, ಈ ರಿಪೋರ್ಟ್ ಆಧರಿಸಿ ವರದಿ ಸಿದ್ಧಪಡಿಸಲಾಗುತ್ತೆ
ಒಂದೆಡೆ ಪೆನ್ಡ್ರೈವ್ ಪ್ರಕರಣದ ತನಿಖೆ ಚುರುಕುಗೊಂಡಿದ್ರೆ, ಮತ್ತೊಂದೆಡೆ ಹಾಸನ ಸಂಸದನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಸಂತ್ರಸ್ಥ ಮಹಿಳೆಯರೇ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಹಾಸನದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಬೃಹತ್ ಪ್ರತಿಭಟನೆ ಮಾಡಿದ್ದಾರೆ.
ಮಗನ ನಂತ್ರ ಅಪ್ಪನ ವಿರುದ್ಧವೂ ದೂರು.. ಪ್ರಜ್ವಲ್ ರೇವಣ್ಣ ಅಶ್ಲಿಲ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್!
ಎ1 ಎಚ್ಡಿ ರೇವಣ್ಣ, ಎ2 ಪ್ರಜ್ವಲ್ ರೇವಣ್ಣ
ಅಶ್ಲೀಲ ವಿಡಿಯೋಗಳನ್ನು ಒಳಗೊಂಡಿರುವ ಪೆನ್ ಡ್ರೈವ್ ಹಾಸನದಲ್ಲಿ ಸದ್ದು ಮಾಡಿದ್ದು, ಇದೀಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾದ ನಂತರ ಪ್ರಕರಣದ ಬಗ್ಗೆ ಮತ್ತಷ್ಟು ಚರ್ಚೆ ಶುರುವಾಗಿದ್ದು, ಸಂತ್ರಸ್ತರಿಂದ ದೂರು ದಾಖಲಾಗಿವೆ. ಹೊಳೆನರಸೀಪುರದಲ್ಲಿ ಸಂತ್ರಸ್ತೆಯೊಬ್ಬರು ಪೊಲೀಸ್ ಠಾಣೆಗೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಪ್ರಜ್ವಲ್ ಅವರ ತಂದೆ ಶಾಸಕ ಎಚ್ಡಿ ರೇವಣ್ಣ ಅವರನ್ನೇ ಮೊದಲ ಆರೋಪಿಯನ್ನಾಗಿ ಮಾಡಿ ಎಫ್ಐಆರ್ ದಾಖಲಿಸಿದ್ದಾರೆ
ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಆಕ್ಷೇಪಾರ್ಹ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹಾಗೂ ತಂದೆ ಎಚ್ಡಿ ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರಿನಲ್ಲಿ ತಂದೆ ಎಚ್ಡಿ ರೇವಣ್ಣ ಅವರನ್ನೇ ಎ1 ಆರೋಪಿಯಾಗಿ ನಮೂದಿಸಿದ್ದು, ಎ2 ಪ್ರಜ್ವಲ್ ರೇವಣ್ಣ ಆಗಿದ್ದಾರೆ. ಈ ಹಿಂದೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ನೀಡಿದ ದೂರಿನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಲವು ಮಹಿಳೆಯರ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಒಳಗೊಂಡಿರುವ ಪೆನ್ ಡ್ರೈವ್ ಹರಿದಾಡಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಅದರ ಬೆನ್ನಲ್ಲೇ ತಂದೆ ಮತ್ತು ಮಗನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಮಹಿಳೆಯ ಘನತೆಗೆ ಧಕ್ಕೆ ಆರೋಪ ಸೇರಿದಂತೆ ಹಲವು ಐಪಿಸಿ ಸೆಕ್ಷೆನ್ 354ಎ , 354ಡಿ ಹಾಗೂ 509ರ ಅಡಿಯಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವು ಗಂಭೀರ ಸ್ವರೂಪ ಪಡೆದಿದ್ದು, ಶೀಘ್ರವೇ ತನಿಖಾ ತಂಡವು ಪ್ರಜ್ವಲ್ ಅವರ ಹುಡುಕಾಟಕ್ಕೆ ಮುಂದಾಗಲಿದೆ ಎನ್ನಲಾಗುತ್ತಿದೆ.
ಸಂಸ್ರಸ್ತೆ ನೀಡಿದ ದೂರಿನಲ್ಲಿ ಏನಿದೆ?
”ನಮ್ಮ ಪತಿಗೆ ಎಚ್ಡಿ ರೇವಣ್ಣ ತಮ್ಮ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ 2015ರಲ್ಲಿ ಹಾಸ್ಟೆಲ್ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ತಮ್ಮ ಮನೆಯಲ್ಲಿ ಅಡುಗೆ ಕೆಲಸಕ್ಕೆ ಬರುವಂತೆ ರೇವಣ್ಣ ಹೇಳಿದ್ದರು. ಅಡುಗೆ ಕೆಲಸಕ್ಕೆ ಸೇರಿಕೊಂಡ ಬಳಿಕ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ವೇಳೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಕೊಠಡಿಯಲ್ಲಿದ್ದಾಗ ಹಣ್ಣು ನೀಡುವ ನೆಪದಲ್ಲಿ ಸೀರೆ ಹಿಡಿದು ಎಳೆದಾಡಿದ್ದಾರೆ.
ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪ್ರಜ್ವಲ್ ರೇವಣ್ಣ ಅಸಭ್ಯವಾಗಿ ವರ್ತಿಸಿದ್ದಾರೆ. ಮೈಗೆ ಎಣ್ಣೆ ಹಚ್ಚಬೇಕೆಂದು ನನ್ನನ್ನು ಕರೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪದೇ ಪದೇ ಕಾಲ್ ಮಾಡಿದ್ದಕ್ಕೆ ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್ ಮಾಡಿದ್ದರು. ಲೈಂಗಿಕ ಕಿರುಕುಳ ಹೆಚ್ಚಾದಾಗ ಕೆಲಸಬಿಟ್ಟು ಹೋಗಿದ್ದೆ” ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ. ಅಶ್ಲೀಲ ವಿಡಿಯೋ ವೈರಲ್ ಆದ ಬಳಿಕ ಆತಂಕಗೊಂಡು ದೂರು ನೀಡಿದ್ದಾರೆ.

