ತಾಳಿಕೋಟಿ : ಪಶ್ಚಿಮ ಬಂಗಾಳದ ಕೊಲ್ಕತ್ತದಲ್ಲಿ ಕರ್ತವ್ಯನಿರತ ಯುವ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಹತ್ಯೆಯನ್ನು ಖಂಡಿಸಿ ಪಟ್ಟಣದಲ್ಲಿ ತಾಳಿಕೋಟಿ ವೈದ್ಯರ ಸಂಘದ ವತಿಯಿಂದ ಶನಿವಾರ ಬೃಹತ್ ಪ್ರತಿಭಟನೆಯನ್ನು ನಡೆಸಿ ತಹಶೀಲ್ದಾರ್ ಕೀರ್ತಿ ಚಾಲಕ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾಕ್ಟರ್ ಆರ್.ಪಿ. ಅಗರವಾಲ ಅವರು ಕಾರ್ಯನಿರತ ಯುವ ವೈದ್ಯೆ ಮೇಲೆ ನಡೆದ ಈ ಘಟನೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಸರ್ಕಾರ ಮಹಿಳಾ ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದರು.
ಈ ಸಮಯದಲ್ಲಿ ತಾಳಿಕೋಟಿ ವೈದ್ಯರ ಸಂಘದ ಪದಾಧಿಕಾರಿಗಳು ಹಾಗೂ ಪಟ್ಟಣದ ವೈದ್ಯರು ಉಪಸ್ಥಿತರಿದ್ದರು.
ವರದಿ : ಅಬ್ದುಲ್ ರೆಹಮಾನ್ ಮೂಕಿಹಾ