ಬೆಂಗಳೂರು: ಕೋಗಿಲು ಪ್ರದೇಶದಲ್ಲಿ ಒತ್ತುವರಿ ತೆರವು ಬಳಿಕ ನಿರಾಶ್ರಿತರಾಗಿ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ರಾಜ್ಯ ಸರ್ಕಾರ ಯುಗಾದಿ ಮತ್ತು ರಂಜಾನ್ ಹಬ್ಬದ ಉಡುಗೊರೆಯಾಗಿ ನಿವೇಶನ ಭಾಗ್ಯ ನೀಡಲು ಮುಂದಾಗಿದೆ.
ಒತ್ತುವರಿ ತೆರವುಗೊಂಡು 3-4 ತಿಂಗಳು ಕಳೆದ ಬಳಿಕ ಇದೀಗ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಇಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಿಕಾಸ ಸೌಧದಲ್ಲಿ ಅರ್ಹರಿಗೆ ನಿವೇಶನದ ಹಕ್ಕು ಪತ್ರಗಳನ್ನು ವಿತರಿಸಲಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಕೇವಲ 40 ಅರ್ಹ ಕುಟುಂಬಗಳಿಗೆ ಮಾತ್ರ ನಿವೇಶನ ಪತ್ರ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕುಟುಂಬಗಳಿಗೆ ಸೌಲಭ್ಯ ವಿಸ್ತರಿಸುವ ನಿರೀಕ್ಷೆಯಿದೆ.
ಬ್ಯಾಟರಾಯನಪುರದಲ್ಲಿರುವ ರಾಜೀವ್ ಗಾಂಧಿ ವಸತಿ ನಿಗಮದ ಸಮುಚ್ಚಯದಲ್ಲಿ ಈ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಹಲವು ದಿನಗಳಿಂದ ಮನೆಗಾಗಿ ಕಾಯುತ್ತಿದ್ದ ನಿರಾಶ್ರಿತರಿಗೆ ಇದು ಸಂತಸದ ಸುದ್ದಿಯಾಗಿದೆ.

