ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪನ್ನು ಆಗಸ್ಟ್ 1ಕ್ಕೆ ಮುಂದೂಡಿಕೆ ಮಾಡಿದೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿ ವಾದ ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಆದರೆ ಎರಡೂ ಕಡೆಯ ವಕೀಲರಿಂದ ಕೆಲ ಸ್ಪಷ್ಟೀಕರಣ ಕೇಳಿದ ನ್ಯಾಯಾಧೀಶರು ಇಂದು ತೀರ್ಪು ಇಲ್ಲ ಎಂದಿದ್ದಾರೆ. ಆಗಸ್ಟ್ 1ಕ್ಕೆ ತೀರ್ಪನ್ನ ಮುಂದೂಡಿದ್ದಾರೆ. ಸ್ಪಷ್ಟೀಕರಣ ಬೇಕಿದ್ದರಿಂದ ಇಂದು ತೀರ್ಪು ಇಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ತನಿಖಾಧಿಕಾರಿ ಹೇಳಿರುವ ದಿನಾಂಕದಂದು ಮೊಬೈಲ್ ಅವರ ಬಳಿ ಇರಲಿಲ್ಲ ಹೀಗಾಗಿ ಸ್ಯಾಮ್ಸಂಗ್ ಮೊಬೈಲ್ ಫೋನ್ ಸಾಕ್ಷ್ಯಗೆ ಬೆಲೆ ಇಲ್ಲ ಎಂದು ಪ್ರಜ್ವಲರ ಪರ ವಕೀಲರು ವಾದಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್ ಪಿಪಿ ಜಗದೀಶ್ ಮಹಜರುನಲ್ಲಿ ಮೊಬೈಲ್ ಪಡೆದಿರುವುದು ಸ್ಪಷ್ಟವಾಗಿದೆ ಎಂದರು. ಈ ವೇಳೆ ಕೇವಲ ಸ್ಪಷ್ಟೀಕರಣ ಬೇಕಾಗಿದೆ. ವಾದವಲ್ಲ ಎಂದ ನ್ಯಾಯಾಧೀಶರು ತಿಳಿಸಿದ್ದು ತೀರ್ಪನ್ನು ಆ.1ಕ್ಕೆ ಮುಂದೂಡಿದರು.
- ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
- ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
- ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
- ಆನ್ಲೈನ್ ಗೇಮಿಂಗ್ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
- ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

