ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪನ್ನು ಆಗಸ್ಟ್ 1ಕ್ಕೆ ಮುಂದೂಡಿಕೆ ಮಾಡಿದೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿ ವಾದ ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಆದರೆ ಎರಡೂ ಕಡೆಯ ವಕೀಲರಿಂದ ಕೆಲ ಸ್ಪಷ್ಟೀಕರಣ ಕೇಳಿದ ನ್ಯಾಯಾಧೀಶರು ಇಂದು ತೀರ್ಪು ಇಲ್ಲ ಎಂದಿದ್ದಾರೆ. ಆಗಸ್ಟ್ 1ಕ್ಕೆ ತೀರ್ಪನ್ನ ಮುಂದೂಡಿದ್ದಾರೆ. ಸ್ಪಷ್ಟೀಕರಣ ಬೇಕಿದ್ದರಿಂದ ಇಂದು ತೀರ್ಪು ಇಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ತನಿಖಾಧಿಕಾರಿ ಹೇಳಿರುವ ದಿನಾಂಕದಂದು ಮೊಬೈಲ್ ಅವರ ಬಳಿ ಇರಲಿಲ್ಲ ಹೀಗಾಗಿ ಸ್ಯಾಮ್ಸಂಗ್ ಮೊಬೈಲ್ ಫೋನ್ ಸಾಕ್ಷ್ಯಗೆ ಬೆಲೆ ಇಲ್ಲ ಎಂದು ಪ್ರಜ್ವಲರ ಪರ ವಕೀಲರು ವಾದಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್ ಪಿಪಿ ಜಗದೀಶ್ ಮಹಜರುನಲ್ಲಿ ಮೊಬೈಲ್ ಪಡೆದಿರುವುದು ಸ್ಪಷ್ಟವಾಗಿದೆ ಎಂದರು. ಈ ವೇಳೆ ಕೇವಲ ಸ್ಪಷ್ಟೀಕರಣ ಬೇಕಾಗಿದೆ. ವಾದವಲ್ಲ ಎಂದ ನ್ಯಾಯಾಧೀಶರು ತಿಳಿಸಿದ್ದು ತೀರ್ಪನ್ನು ಆ.1ಕ್ಕೆ ಮುಂದೂಡಿದರು.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

