Road Accident : ಕ್ಯಾಂಟರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಧಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಬಿದನಗೆರೆ ಬೈಪಾಸ್ ಬಳಿ ಭಾನುವಾರ ಸಂಭವಿಸಿದೆ.
ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ನಟರಾಜ ಬಡಾವಣೆ ನಿವಾಸಿ ಭಾರತ್ ಕೋಪರೇಟಿವ್ ಬ್ಯಾಂಕ್ ನಿರ್ದೇಶಕ ಸೀಬೆಗೌಡ (45) ಪತ್ನಿ ಶೋಭಾ (36) ಮಕ್ಕಳಾದ ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು.
ಬಿದನಗೆರೆ ಕ್ರಾಸ್ನಲ್ಲಿ ಕೆಎ 41 M 4029 ನಂಬರಿನ ಎರಿಟಿಗಾ ಕಾರು ಹಾಗೂ ಕೆಎ 52c 2336 ನಂಬರ್ನ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದೆ. ಕಳೆದ ರಾತ್ರಿ 8.30ರ ಸುಮಾರಿಗೆ ನಡೆದಿದೆ ಅಪಘಾತ ನಡೆದಿದೆ. ಕ್ಯಾಂಟರ್ ಕುಣಿಗಲ್ ಕಡೆಯಿಂದ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದಿಂದ ಎರಿಟಿಗಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೀಬೆಗೌಡ ತನ್ನ ಮಗನನ್ನು ಭಾನುಕಿರಣ್ ನನ್ನು ಕುಣಿಗಲ್ ನ ವಾಲಿ ಇಂಟರ್ ನ್ಯಾಷನಲ್ ಶಾಲೆಗೆ ಬಿಡಲು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಬರುವಾಗ ಕಾರಿಗೆ ಹಾಸನ ನಡೆಯಿಂದ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.
ಮೃತ ಸೀಬೇಗೌಡ ಅವರು ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ನಾಲ್ವರ ಸಾವು ಕುಟುಂಬಸ್ಥರನ್ನು ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ಮೃತರ ಅಂತ್ಯಕ್ರಿಯೆಯು ಇಂದು ಮಾಗಡಿಯಲ್ಲಿ ನಡೆಯಲಿದೆ. ಸೀಬೇಗೌಡ ಅವರು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರ ಅತ್ಯಾಪ್ತರಾಗಿದ್ದರು.

