ವಿಜಯಪು : ವಿಜಯಪುರದ ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣ ಸದ್ಯ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸೆ.16 ರಂದು ವಿಜಯಪುರದ ಎಸ್ಬಿಐ ಬ್ಯಾಂಕ್ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಸಿಬ್ಬಂದಿಗಳನ್ನೇ ಬೆದರಿಸಿ ಕೆಜಿಗಟ್ಟಲೆ ಚಿನ್ನ, ಕೋಟಿಗಟ್ಟಲೆ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.
ಪ್ರಕರಣ ಬಹಿರಂಗವಾಗುತ್ತಿದ್ದಂತೆ ಸ್ಥಳೀಯರು, ಪೊಲೀಸರು ಬ್ಯಾಂಕ್ನತ್ತ ದೌಡಾಯಿಸಿದ್ದರು. ಅಲ್ಲದೇ ವಿಜಯಪುರ-ಮಹಾರಾಷ್ಟ್ರದ ಗಡಿಯಲ್ಲಿ ಕಾರೊಂದು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಂತಾಗಿದೆ. ಆರೋಪಿಗಳ ಪತ್ತೆಗಾಗಿ ಖಾಕಿ ನಿರಂತರ ಶೋಧ ನಡೆಸುತ್ತಲೇ ಇದೆ.
ವಿಜಯಪುರದ ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣ ಸದ್ಯ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಅತ್ತ ಪೊಲೀಸರು ಕೂಡಾ ಆರೋಪಿಗಳ ಪತ್ತೆಗಾಗಿ ತನಿಖೆ ಶುರು ಮಾಡಿದ್ದಾರೆ.
21 ಕೋಟಿ ರೂ. ಕೋಟಿ ದರೋಡೆ : ಎಸ್ಪಿ ಲಕ್ಷ್ಮಣ ನಿಂಬರಗಿ
ನಗರದಲ್ಲಿ ಮಾತನಾಡಿದ ಅವರು, 1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ದರೋಡೆಯಾಗಿದೆ. ಬ್ಯಾಂಕ್ ದರೋಡೆಗೆ 5 ಜನರು ಬಂದಿದ್ದರು. 6 ಜನ ಬ್ಯಾಂಕ್ ಸಿಬ್ಬಂದಿ ಹಾಗೂ 4 ಜನ ಗ್ರಾಹಕರನ್ನು ದರೋಡೆಕೋರರು ಲಾಕ್ ಮಾಡಿದ್ದಾರೆ.
ಕೋಣೆಯಲ್ಲಿ ಕೂಡಿ ಹಾಕಿ, ಪ್ಲಾಸ್ಟಿಕ್ ಬ್ಯಾಂಡ್ಗಳಿಂದ ಕೈ, ಕಾಲು ಕಟ್ಟಿ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಪಂಡರಾಪುರ ಕಡೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಸದ್ಯದ ಮಾಹಿತಿ ಪ್ರಕಾರ 1 ಕೋಟಿ ರೂ. ನಗದು, ಅಂದಾಜು 20 ಕೆಜಿ ಚಿನ್ನಾಭರಣ ಸೇರಿದಂತೆ 21 ಕೋಟಿ ರೂ. ಮೌಲ್ಯದ ನಗದು ಚಿನ್ನಾಭರಣ ದರೋಡೆಯಾಗಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ಸಂಜೆ 6:30 ರಿಂದ 7:30ರ ನಡುವೆ ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ದರೋಡೆ ನಡೆದಿದೆ. ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಮೊದಲೇ ಒಳಗೆ ಬಂದು ಕುಳಿತಿದ್ದ. ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ಲಾಕರ್ ಓಪನ್ ಇತ್ತು. ಆಗ ಬಂದೂಕಿನಿಂದ ಬೆದರಿಸಿ, ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಒಟ್ಟು 398 ಪ್ಯಾಕ್ ಚಿನ್ನ ಅಂದರೆ 21 ಕೋಟಿ ರೂ. ಮೌಲ್ಯದ ಚಿನ್ನ, ನಗದು ದರೋಡೆಯಾಗಿದೆ ಎಂದಿದ್ದಾರೆ.

