ನವದೆಹಲಿ: ಚಾಮರಾಜನಗರದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ ಕುರಿತು ಪ್ರತಿಕ್ರಿಯಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ಸೂಚಿಸಿದೆ. ಅಲ್ಲದೇ, ವನ್ಯಜೀವಿ ಅಭಯಾರಣ್ಯಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದೆ. ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ.
ಮಲೆ ಮಹದೇಶ್ವರ ಬೆಟ್ಟಗಳ ವನ್ಯಜೀವಿ ಅಭಯಾರಣ್ಯದಲ್ಲಿ ಕಳೆದ ತಿಂಗಳು ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದವು. ಅರಣ್ಯಾಧಿಕಾರಿಗಳು ಮತ್ತು ಅರಣ್ಯ ವೀಕ್ಷಕರ ಹುದ್ದೆಗಳಲ್ಲಿ 80% ಖಾಲಿ ಇವೆ ಎಂದು ನ್ಯಾಯಾಲಯವು ಬೇಸರ ವ್ಯಕ್ತಪಡಿಸಿದೆ.
ಎಲ್ಲಾ ರಾಜ್ಯಗಳನ್ನು ಸೇರಿಸಿಕೊಂಡು ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಇಷ್ಟು ದೊಡ್ಡ ಪ್ರಮಾಣದಲ್ಲಿ ಹುದ್ದೆ ಖಾಲಿ ಇದೆ. ಕರ್ನಾಟಕ ಸರ್ಕಾರದೊಂದಿಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (ಎಂಒಇಎಫ್ಸಿಸಿ) ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸಿಜೆಐ ಭೂಷಣ್ ಆರ್ ಗವಾಯಿ ನೇತೃತ್ವದ ಪೀಠ ಸೂಚಿಸಿದೆ.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

