By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖಜಾನೆ ತುಂಬಿಸಲು ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳಿಂದ ಸುಲಿಗೆ ಮಾಡುತ್ತಿದೆ : BY ವಿಜಯೇಂದ್ರ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಖಜಾನೆ ತುಂಬಿಸಲು ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳಿಂದ ಸುಲಿಗೆ ಮಾಡುತ್ತಿದೆ : BY ವಿಜಯೇಂದ್ರ
ರಾಜ್ಯ-KarnatakaLatest

ಖಜಾನೆ ತುಂಬಿಸಲು ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳಿಂದ ಸುಲಿಗೆ ಮಾಡುತ್ತಿದೆ : BY ವಿಜಯೇಂದ್ರ

State government is extorting from small traders to fill the treasury: BY Vijayendra

Published July 23, 2025
Share
2 Min Read
BY Vijayendra
SHARE

ಬೆಂಗಳೂರು: ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳ ಮೇಲೆ ಹಾಗೂ ಬೀದಿಬದಿ ವ್ಯಾಪಾರಿಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ಕೊಟ್ಟಿದ್ದು, ಸಿಎಂ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ, ವಸೂಲಿ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆ ನೋಟಿಸ್‌ ಕಳುಹಿಸಿರುವುದು ಸರಿಯಲ್ಲ. ಈ ರೀತಿ ತೆರಿಗೆ ಇಲಾಖೆ ಮೂಲಕ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ. ಸಣ್ಣ ವ್ಯಾಪಾರಿಗಳು ಮಾಡುತ್ತಿರುವ ಹೋರಾಟಕ್ಕೆ ಬಿಜೆಪಿ ಸಂಪೂರ್ಣವಾಗಿ ಬೆಂಬಲ ನೀಡಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಮಂತ್ರಿಗಳು ಹಾಗೂ ಇತರ ಸಚಿವರು ಕೇಂದ್ರ ಸರ್ಕಾರದ ಮೇಲೆ ಬೆಟ್ಟು ತೋರಿಸುತ್ತಿದ್ದಾರೆ. ಆದರೆ ಇದು ರಾಜ್ಯ ಸರ್ಕಾರದ ಕೆಲಸ. ಮುಖ್ಯವಾಗಿ ಜಿಎಸ್‍ಟಿ ವ್ಯವಸ್ಥೆಯಲ್ಲಿ 3 ಸ್ಲ್ಯಾಬ್‍ಗಳಿದ್ದು, ಹಾಲು ಮತ್ತಿತರ ಕೆಲ ವಸ್ತುಗಳು ಜಿಎಸ್‍ಟಿ ವ್ಯಾಪ್ತಿಗೆ ಬರುವುದಿಲ್ಲ, ಆದರೂ ಸಹ ವ್ಯಾಪಾರಿಗಳಿಗೆ ನೋಟಿಸ್‌ ಕೊಟ್ಟಿದ್ದಾರೆ. ಎಲ್ಲರಿಗೂ ವಾಣಿಜ್ಯ ತೆರಿಗೆ ಇಲಾಖೆಯು ಶೇ.18 ರಷ್ಟು ತೆರಿಗೆ ಪಾವತಿಗೆ ನೋಟಿಸ್ ಕೊಡುತ್ತಿದೆ. ಖಜಾನೆ ಖಾಲಿ ಆಗಿದೆ ಹಾಗಾಗಿ ಯಾವುದರ ಬಗ್ಗೆಯೂ ಗಮನಕೊಡದೇ ವ್ಯಾಪಾರಿಗಳಿಗೆ ಸಮಸ್ಯೆ ಮಾಡುತ್ತಿದ್ದಾರೆ. ಇದರಿಂದ ವ್ಯಾಪಾರಿಗಳು ಆತಂಕಗೊಂಡಿದ್ದಾರೆ. ರಾಜ್ಯ ಸರ್ಕಾರ ತಕ್ಷಣವೇ ಈ ನಿರ್ಧಾರವನ್ನ ವಾಪಾಸ್‌ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಈ ಹಿಂದೆ ಸಿದ್ದರಾಮಯ್ಯ ಅವರು ಕರ್ನಾಟಕ ಜಿಎಸ್‍ಟಿ ಸಂಗ್ರಹದ ವಿಷಯದಲ್ಲಿ ಮೊದಲ ಸ್ಥಾನಕ್ಕೆ ಬರಬೇಕು ಎಂದು ಹೇಳಿದ್ದರು. ಅಲ್ಲದೇ, ಮಹಾರಾಷ್ಟ್ರವನ್ನು ಹಿಂದಿಕ್ಕಿ ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹ ಮಾಡಬೇಕು ಎಂದು ಅಧಿಕಾರಿಗಳಿಗೆ ಒತ್ತಡ ಹೇರಿ ಗುರಿಯನ್ನ ಸಹ ನೀಡಿದ್ದರು. ಇದೀಗ ಖಜಾನೆ ಖಾಲಿ ಆಗಿದೆ. ಹಾಗಾಗಿ ಅಕ್ರಮವಾಗಿ ವ್ಯಾಪಾರಿಗಳಿಗೆ ನೋಟಿಸ್‌ ಕೊಟ್ಟು ಸಂಗ್ರಹ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೇಕರಿ, ಪಾನ್‌ ಶಾಪ್‌ ಮತ್ತು ಸಣ್ಣ ಕಿರಾಣಿ ವರ್ತಕರ ಅಂಗಡಿಗಳಿಗೆ ತೆರಿಗೆ ನೋಟಿಸ್‌ ಜಾರಿ ಮಾಡಿರುವುದನ್ನು ವಿರೋಧಿಸಿ ಜು. 25 ಕ್ಕೆ ರಾಜ್ಯಾದ್ಯಂತ ಬೇಕರಿ ಮಾಲಿಕರು ಮುಷ್ಕರಕ್ಕೆ ಕರೆ ನೀಡಿದ್ದರು. ಕೋಟಿ ಕೋಟಿ ಕಾಳಧನ ಹೊಂದಿರುವ ಸಿರಿವಂತರನ್ನು ಬಿಟ್ಟು ಬಡ ವ್ಯಾಪಾರಿಗಳನ್ನು ಸುಲಿಗೆ ಮಾಡಲಾಗುತ್ತಿದೆ ಎಂದು ಸಣ್ಣ ವರ್ತಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಷ್ಟು ದಿನ 1 ರೂ. ಗಳಿಂದ ಹಿಡಿದು ಸಾವಿರಾರು ರೂ. ಗಳವರೆಗೆ ಫೋನ್‌ ಪೇ, ಗೂಗಲ್‌ ಪೇ, ಪೇಟಿಎಂ ಮತ್ತಿತರ ಅಪ್ಲಿಕೇಶನ್‌ ಮೂಲಕ ಹಣ ಸ್ವೀಕರಿಸುತ್ತಿದ್ದ ವರ್ತಕರು ಈಗ ತಮಗೆ ನಗದು ಹಣವನ್ನೇ ಪಾವತಿಸುವಂತೆ ಗ್ರಾಹಕರನ್ನು ಒತ್ತಾಯಿಸುತ್ತಿದ್ದಾರೆ. ವರ್ತಕರಿಗೆ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿರುವುದಕ್ಕೆ ಬೆಂಗಳೂರಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಎಚ್ಚೆತ್ತಿರೋ ವಾಣಿಜ್ಯ ಇಲಾಖೆ ವರ್ತಕರ ಕೋಪ ತಣ್ಣಗಾಗಿಸಲು ಮುಂದಾಗಿತ್ತು.

ವಾಣಿಜ್ಯ ಇಲಾಖೆ ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದೆ.ವರ್ತಕರು ನೋಟಿಸ್ ಬಂದಿರುವ ಕಚೇರಿಗೆ ತೆರಳಿ ಸೂಕ್ತ ದಾಖಲಾತಿ ನೀಡಿ ವಿವರಣೆ ನೀಡಬೇಕು. ಇದ್ರಿಂದ ತೆರಿಗೆ ವಿನಾಯಿತಿ ಇರುವ ಸರಕು ಸೇವೆಗಳನ್ನು ಹೊರತುಪಡಿಸಿ, ತೆರಿಗೆ ಇರುವ ಸರಕಿಗೆ ಮಾತ್ರ ತೆರಿಗೆ ವಿಧಿಸುತ್ತಾರೆ ಎಂದಿದೆ.

You Might Also Like

ಏಜೆಂಟರಿಂದ ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಬಗ್ಗೆ ಅಪಪ್ರಚಾರ, ಕಣ್ಮುಚ್ಚಿ ಕುಳಿತ ಇಲಾಖೆ

ಕರ್ನಾಟಕದಲ್ಲಿದ್ದ ಐವರು ಪಾಕ್​ ಪ್ರಜೆಗಳ ಗಡಿಪಾರು

ರಸ್ತೆಯಲ್ಲಿ ಅಡ್ಡಾ ದಿಡ್ಡಿ ವಾಹನಗಳು, ಟ್ರಾಫಿಕ್ ಪೊಲೀಸರು ನಾಪತ್ತೆ

ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

ಕನ್ನಡ ಹೋರಾಟಗಾರ ಮ.ರಾಮ ಮೂರ್ತಿ ಅವರ ಧರ್ಮಪತ್ನಿ ಕಮಲಮ್ಮವಿಧಿವಶ

TAGGED:#BY Vijayendra
Share This Article
Facebook Copy Link Print
Previous Article ಚಿತ್ರದುರ್ಗ : ವಿದ್ಯುತ್ ತಂತಿ ತಗುಲಿ ಮೂವರು ಸಾವು
Next Article School Holiday Rain ಭಾರೀ ಮಳೆ ಹಿನ್ನೆಲೆಯಲ್ಲಿ ಜು.24 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up