UPSC ಪಾಸ್ ಮಾಡಿದ ಕುರಿಗಾಹಿ
ಕುರಿ ಮೇಯಿಸುತ್ತಲೇ UPSC ಗೆಲುವು
ಮಹಾರಾಷ್ಟ್ರ ಮೂಲ ಆದ್ರು ಕನ್ನಡ ಮಾತ್ನಾಡೋ ಕುರಿಗಾಯಿ
ಯುವಕ UPSC Topper ಆದ ರೋಚಕ ಕಥೆ
ಒಂದೆಡೆ ಇಡೀ ದೇಶ ಪಹಲ್ಗಾಮ್ನಲ್ಲಿನ ಪೈಶಾಚಿಕ ಭಯೋತ್ಪಾದಕ ದಾಳಿಗೆ ಮರುಕಪಟ್ಟಿದ್ದರೆ, ಈ ಶೋಕದ ಸಮಯದಲ್ಲೂ ಬೆಳಗಾವಿ ಜಿಲ್ಲೆಯ ನಾನಾವಾಡಿ ಗ್ರಾಮದ ಕುರಿಗಾಹಿ ಸಮುದಾಯಕ್ಕೆ ಅಭೂತಪೂರ್ವ ಸಂತೋಷದ ಸಮಯವಾಗಿತ್ತು.
ಅದಕ್ಕೆ ಕಾರಣವೆಂದರೆ, ಅವರ ಸಮುದಾಯದ ಒಬ್ಬ ಹುಡುಗ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ರಾಂಕ್ ಗಳಿಸಿದ್ದು ಹೌದು ಮಹಾರಾಷ್ಟ್ರದ ಅಮಗೆ ಗ್ರಾಮದ ಬೀರಪ್ಪ ಸಿದ್ದಪ್ಪ ಡೋಣಿ ರಜೆಗಾಗಿ ಬೆಳಗಾವಿ ಜಿಲ್ಲೆಯ ನಾನಾವಾಡಿಯಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿ ಮಾಡಲು ಹೋಗಿದ್ದರು.
ಏಪ್ರಿಲ್ 23 ರಂದು, ಅವರ ಸಂಬಂಧಿಕರು ಬೀರಪ್ಪ ಸಿದ್ದಪ್ಪ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿಚಾರ ಗೊತ್ತಾಗಿದೆ. ಕೆಲ ಸಮದಲ್ಲೇ ಅವರು ಅವರು ಪ್ರತಿದಿನ ಕುರಿಗಳನ್ನು ಮೇಯಿಸುವ ಹುಲ್ಲುಗಾವಲುಗಳಲ್ಲಿ ಭರ್ಜರಿಯಾಗಿ ಬೀರಪ್ಪ ಸಿದ್ದಪ್ಪ ಡೋಣಿಗೆ ಸನ್ಮಾನ ಸಮಾರಂಭ ಮಾಡಿದ್ದಾರೆ.
ನಾನಾವಾಡಿಯಲ್ಲಿ ವಾಸವಿರುವ ಈ ಯುವಕನ ಹೆಸರು ಬೀರಪ್ಪ ಸಿದ್ದಪ್ಪ ಡೋಣಿ ಎಂದು. ಮೂಲತಃ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಜಿಲ್ಲೆಯ ಎಮಗೆ ಗ್ರಾಮದ ಯುವಕ. ಸದ್ಯ ಬೀರಪ್ಪ ದೇಶವೇ ತಿರುಗಿ ನೋಡುವ ಸಾಧನೆಯನ್ನ ಮಾಡಿದ್ದಾನೆ.ದೇಶದ ಅತ್ಯುನತ್ತ ಪರೀಕ್ಷೆಯಲ್ಲಿ ಒಂದಾದ ನಾಗರೀಕ ಸೇವಾ ಪ್ರಾಧಿಕಾರ ನಡೆಸುವ ಪರೀಕ್ಷೆಯಲ್ಲಿ ಬೀರಪ್ಪ ದೇಶಕ್ಕೆ 551 ನೇ ರ್ಯಾಂಕ್ ಪಡೆದು ತಾನು ಕಲಿತ ಶಾಲೆ ಹಾಗೂ ತನ್ನೂರು ಹಾಗೂ ತನ್ನ ಕುಟುಂಬಕ್ಕೆ ಕೀರ್ತಿ ತಂದಿದ್ದಾನೆ.
ಸದ್ಯ ಕುರಿ ಹಿಂಡಿನಲ್ಲಿಯೇ ಇರುವ ಈತ ಮುಂದೆ ದೇಶದಲ್ಲಿ ಐಪಿಎಸ್ ಆಫೀಸರ್ ಆಗಿ ಕೆಲಸ ಮಾಡುವ ಆಸೆ ಹೊಂದಿದ್ದಾನೆ.ಸಿದ್ದಪ್ಪ ಹಾಗೂ ಬಾಳವ್ವ ದಂಪತಿಯ ಮೂರನೇ ಮಗನಾಗಿ ಜನಿಸಿದ ಬೀರಪ್ಪ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣವನ್ನು ತನ್ನೂರು ಎಮಗೆಯಲ್ಲಿ ಮುಗಿಸಿ ನಂತರ ಪಿಯು ಶಿಕ್ಷಣವನ್ನು ವಿಜ್ಞಾನ ವಿಭಾಗದಲ್ಲಿ ಮುಗಿಸಿ ನಂತರ ಬಿಟೆಕ್ ಪದವಿ ಪಡೆದಿದ್ದಾನೆ.
ಈತನ ಪ್ರತಿಭೆಗೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೋಸ್ಟ್ ಆಫೀಸ್ ನಲ್ಲಿ ಕೆಲಸ ಸಿಕ್ಕಿತ್ತು. ಆದರೆ ಅದಕ್ಕೆ ತೃಪ್ತಿ ಹೊಂದದ ಬೀರಪ್ಪ ಅದಕ್ಕೆ ರಾಜೀನಾಮೆ ನೀಡಿ 2021 ರಿಂದ ಓದಲು ಪ್ರಾರಂಭ ಮಾಡಿದ್ದ. ಯುಪಿಎಸ್ಸಿ ಪರೀಕ್ಷೆಯನ್ನು ಪಾಸ್ ಆಗಲೇಬೇಕು ಎಂದು ಹಠ ಹಿಡಿದು ಕಡೆಗೆ ಮೂರನೇ ಪ್ರಯತ್ನದಲ್ಲಿ ಯುಪಿಎಸ್ಸಿಯಲ್ಲಿ ದೇಶಕ್ಕೆ 551 ನೇ ರ್ಯಾಂಕ್ ಪಡೆಯುವುದರ ಮೂಲಕ ತನ್ನ ಕನಸು ನನಸಾಗಿಸಿಕೊಂಡಿದ್ದಾನೆ.
ಬೀರಪ್ಪನ ತಂದೆ ಸಿದ್ದಪ್ಪಗೆ ತಾನೂ ಸೈನ್ಯದಲ್ಲಿ ಕೆಲಸ ಮಾಡಬೇಕು ಎಂಬ ಆಸೆಯಿತ್ತು, ಆದರೆ ಅದು ಕೈಗೂಡಲು ಆಗಲಿಲ್ಲ ಹೀಗಾಗಿ ಸಿದ್ದಪ್ಪನ ಮೊದಲ ಮಗ ಅಂದರೆ ಬೀರಪ್ಪನ ಅಣ್ಣ ತಾನು ಸೈನ್ಯಕ್ಕೆ ಸೇರಿ ತಂದೆಯ ಆಸೆ ಈಡೇರಿಸಿದ್ದಾನೆ.

