ನವದೆಹಲಿ: ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Malikarjuna Kharge) ಅವರು ಮತದಾನದ ಅಂಕಿ-ಅಂಶಗಳ ಬಿಡುಗಡೆ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಚುನಾವಣಾ ಆಯೋಗ (Election Commision) ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ಅಧಾರರಹಿತವಾಗಿದ್ದು, ಗೊಂದಲ ಸೃಷ್ಟಿಸುತ್ತದೆ. ನ್ಯಾಯಸಮ್ಮತ ಚುನಾವಣೆಗೆ ಅಡ್ಡಿಪಡಿಸುವಂತಿದೆ. ಆರೋಪಗಳು ಅಸಮರ್ಥನೀಯವಾಗಿದೆ, ಸತ್ಯಗಳಿಲ್ಲದ ಗೊಂದಲವನ್ನು ಹರಡುವ ಪಕ್ಷಪಾತ ಮತ್ತು ಉದ್ದೇಶಪೂರ್ವಕ ಪ್ರಯತ್ನವಾಗಿದೆ ಎಂದು ಆಯೋಗ ಖರ್ಗೆ ಹೇಳಿಕೆಯನ್ನು ಖಂಡಿಸಿದೆ.ಇದನ್ನೂ ಓದಿ: 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ
ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷರು ಇಂಡಿಯಾ(INDIA) ಬ್ಲಾಕ್ ನಾಯಕರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲಿಯೂ ಹಂಚಿಕೊಂಡಿದ್ದರು. ಚುನಾವಣಾ ಆಯೋಗವು ನಿಜವಾದ ಮತದಾನದ ಅಂಕಿ-ಅಂಶಗಳನ್ನು ಪ್ರಕಟಿಸಲು ನಿರಾಕರಿಸುವುದು, ಮತದಾನದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಲು ವಿಳಂಬ ಮಾಡುವುದು ಮತ್ತು ಮುಂದಿನ ಹಂತಗಳಿಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸದಿರುವುದು ಲೋಕಸಭೆ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಬಹುದು ಎಂದಿದ್ದರು. ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣಗೆ ಹೆಚ್ಚಿದ ಸಂಕಷ್ಟ, ದಾಖಲಾಯ್ತು ಮತ್ತೊಂದು ಅತ್ಯಾಚಾರ ಕೇಸ್