ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ (Congress) ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂಸು ಸಿಎಂ ಸಿದ್ದರಾಮಯ್ಯ (Siddaramaiah) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರು ಮೈಸೂರಿನಲ್ಲಿ (Mysuru) ಮತದಾನ ಮಾಡಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿ, ನಿನ್ನೆ ಹಾಗೂ ಮೊನ್ನೆ ಮೊದಲ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೇಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಈ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು. ಇದನ್ನೂ ಓದಿ: ಗಂಟೆಗೂ ಹೆಚ್ಚು ಕಾಲ ನಿಂತು ಮತ ಚಲಾಯಿಸಿದ ಗೋಲ್ಡನ್ ಕ್ವೀನ್ ದಂಪತಿ
14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗುವುದಿಲ್ಲ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ. ಹರಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಒಟ್ಟಾಗಿ ಬಂದು ಮತದಾನ ಮಾಡಿದ ದೊಡ್ಮನೆ ಮಂದಿ

