ಮೈಸೂರು: ನಾಡಹಬ್ಬ ದಸರಾ ಆಚರಣೆ ಜತೆಯಲ್ಲೇ ಅರಮನೆಯಲ್ಲಿ ರಾಜವಂಶಸ್ಥರಿಂದ ನವರಾತ್ರಿ ಆಚರಣೆಯ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಪ್ರಮುಖ ದಿನಗಳಂದು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಸೆ.16ರಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ನಡೆಯಲಿದ್ದು, ಅಂದು ಬೆಳಗ್ಗೆ 10ರಿಂದ 11ರವರೆಗೆ ಪ್ರವೇಶ ನಿರ್ಬಂಧಿಸಿದೆ. ಪೂಜಾ ಕೈಂಕರ್ಯ: ಸೆ.22ರಂದು ಖಾಸಗಿ ದರ್ಬಾರ್ನಲ್ಲಿ ರಾಜವಂಶಸ್ಥರು ಪೂಜಾ ಕೈಂಕರ್ಯ ನಡೆಸಲಿದ್ದು, ಅಂದು 10ರಿಂದ ಮಧ್ಯಾಹ್ನ 2ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಅ.1ರಂದು ಮಹಾನವಮಿ ಹಾಗೂ ಆಯುಧ ಪೂಜೆಯ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಆದ್ದರಿಂದ ಈ ದಿನದಂದು ಸಂಪೂರ್ಣವಾಗಿ ಪ್ರವೇಶ ನಿರ್ಬಂಧಿಸಲಾಗಿದೆ.
ಅ.2ರಂದು ವಿಜಯದಶಮಿ ಆಚರಣೆ ಇರುವುದರಿಂದ ಈ ದಿನದಂದು ಸಹ ಅರಮನೆ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ಅರಮನೆ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

