By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರಿ ಕೆಸರೆರೆಚಾಟಕ್ಕೆ ಕಾರಣವಾಯ್ತು ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಭಾರಿ ಕೆಸರೆರೆಚಾಟಕ್ಕೆ ಕಾರಣವಾಯ್ತು ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ

BlogLatestMain PostTop Storiesರಾಷ್ಟ್ರೀಯ-National

ಭಾರಿ ಕೆಸರೆರೆಚಾಟಕ್ಕೆ ಕಾರಣವಾಯ್ತು ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ

Tirupati Laddu row: Temple trust backs Naidu's ‘animal fat’ claims, Jagan says ‘CM using god for political gain’

Published September 20, 2024
Share
2 Min Read
Tirupati-Laddu.jpg
SHARE

ತಿರುಪತಿ: ತಿರುಪತಿ ದೇವಸ್ಥಾನದಲ್ಲಿ ನೀಡು ಲಡ್ಡು ಪ್ರಸಾದದಲ್ಲಿ ಹಂದಿ ಮತ್ತು ದನದ ಕೊಬ್ಬು ಬಳಕೆ ಮಾಡಿರುವುದು ಲಾಬ್ ರಿಪೋರ್ಟ್ ನಿಂದ ದೃಢಪಟ್ಟಿದೆ ಎಂದು ಆಡಳಿತರೂಢ ಟಿಡಿಪಿ ಆರೋಪಿಸಿದೆ. ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದನ್ನು ಗುಜರಾತ್ ಮೂಲದ ಜಾನುವಾರು ಪ್ರಯೋಗಾಲಯ, NDDB CALF Ltd ದೃಢಪಡಿಸಿದೆ ಎಂದು ಆಡಳಿತಾರೂಢ ತೆಲುಗು ದೇಶಂ ಪಕ್ಷ ಹೇಳಿದೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿದ ಟಿಡಿಪಿ ವಕ್ತಾರ ಆನಂ ವೆಂಕಟ ರಮಣ ರೆಡ್ಡಿ ಅವರು, ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್‌, ಸೋಯಾಬಿನ್‌, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ ಎಂದರು.

ಜಗನ್ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು :
ಖ್ಯಾತ ವಕೀಲ ವಿನೀತ್ ಜಿಂದಾಲ್ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ಸಲ್ಲಿಸಿದ್ದಾರೆ. ತಿರುಮಲ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆಯನ್ನು ಬಳಸಿ ಜಗನ್ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ವೈಸಿಪಿ ಮುಖ್ಯಸ್ಥರು ತಮ್ಮ ಕೃತ್ಯಗಳಿಂದ ಹಿಂದೂಗಳ ಆತ್ಮವನ್ನು ಕೊಂದಿದ್ದಾರೆ ಮತ್ತು ಅವರ ನಂಬಿಕೆ, ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪಾವಿತ್ರ್ಯತೆಗೆ ಬೆಂಕಿ ಹಚ್ಚಿದ್ದಾರೆ ಎಂದು ದೂರಿದ್ದು, ಕೇಂದ್ರ ಗೃಹ ಸಚಿವಾಲಯ ಹಾಗೂ ಆಂಧ್ರ ಮತ್ತು ಉತ್ತರ ಪ್ರದೇಶದ ಡಿಜಿಪಿಗಳಿಗೆ ದೂರು ನೀಡಿದ್ದಾರೆ.

ಪ್ರಾಣಿ ಕೊಬ್ಬಿನ ತುಪ್ಪ ಪೂರೈಸಿದ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವೈಸಿಪಿ ಮುಖ್ಯಸ್ಥ ಜಗನ್ ಹಾಗೂ ಅಂದಿನ ಟಿಟಿಡಿ ಆಡಳಿತ ವರ್ಗಕ್ಕೆ ಮನವಿ ಮಾಡಿದ್ದರೂ, ಜಗನ್ ಉದ್ದೇಶಪೂರ್ವಕವಾಗಿ ಇಂತಹ ಕೃತ್ಯಗಳನ್ನು ಎಸಗಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಕಾರಣರಾದ ಪ್ರತಿಯೊಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 152, 192, 196, 298 ಮತ್ತು 353 ರ ಅಡಿಯಲ್ಲಿ ತಕ್ಷಣವೇ ಪ್ರಕರಣ ದಾಖಲಿಸಬೇಕು ಎಂದು ಅವರು ವಿನಂತಿಸಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯೂ ಕ್ರಮ ಕೈಗೊಳ್ಳುವಂತೆ ವಕೀಲ ವಿನೀತ್ ಜಿಂದಾಲ್ ಮನವಿ ಮಾಡಿದ್ದಾರೆ.

ಜಗನ್ ಮೋಹನ್ ರೆಡ್ಡಿ ಮಾನಹಾನಿ ಆರೋಪ :
ಲಡ್ಡು ಪ್ರಸಾದ ವಿವಾದ ಇದೀಗ ಹೈಕೋರ್ಟ್​ ಮೆಟ್ಟಿಲೇರಿದ್ದು ಲಡ್ಡು ಪ್ರಕರಣದಲ್ಲಿ ವೈಎಸ್‌ಪಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಾನಹಾನಿಯಾಗುತ್ತಿದೆ ಎಂದು ಆರೋಪಿಸಿ ಆಂಧ್ರದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನವೋಲು ಸುಧಾಕರ್ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಲಡ್ಡು ಪ್ರಸಾದ ತಯಾರಿಸಲು ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆಯನ್ನು ಬಳಸಲಾಗಿದೆ ಎಂದು ಆರೋಪಿಸಿ ವೈ.ಎಸ್. ಜಗನ್ ವಿರುದ್ಧ ಅಪಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಅವರು ಹೈಕೋರ್ಟ್‌ಗೆ ಮನವಿ ಮಾಡಿದರು.

ಈ ಕುರಿತು ಕೂಡಲೇ ಸಮಿತಿ ರಚಿಸಿ ತನಿಖೆ ನಡೆಸುವಂತೆ ಪೀಠವನ್ನು ಸುಧಾಕರ್ ರೆಡ್ಡಿ ಕೋರಿದರು. ಆದರೆ, ಹೈಕೋರ್ಟ್ ಪ್ರತಿಕ್ರಿಯಿಸಿ, ಈಗ ತುರ್ತು ವಿಚಾರಣೆ ನಡೆಸುವ ಅಗತ್ಯವಿಲ್ಲ, ಮುಂದಿನ ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.

You Might Also Like

IPL 2025 Final : RCB vs PBKS ಫೈನಲ್ ಪಂದ್ಯಕ್ಕೆ ಕ್ಷಣಗಣನೆ

‘ಧುರಂಧರ್ 2’ಗೆ ಸೆನ್ಸಾರ್ ಕತ್ತರಿ, ನಾಳೆ ತೆರೆಗೆ ಬರುತ್ತಿದೆ ಬಹು ನಿರೀಕ್ಷಿತ ಚಿತ್ರ

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

ಜಮೀನಿನಲ್ಲಿ ಬೆಳೆದಿದ್ದ 92 ಸಾವಿರ ಮೌಲ್ಯದ ಗಾಂಜಾಸೊಪ್ಪು ಜಪ್ತಿ

ವಯನಾಡ್ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 238ಕ್ಕೆ ಏರಿಕೆ

TAGGED:Tirupati laddu
Share This Article
Facebook Copy Link Print
Previous Article Supreme Court rebukes High Court ಹೈಕೋರ್ಟ್ ನ್ಯಾಯಮೂರ್ತಿ ಹೇಳಿಕೆಗಳ ಕುರಿತು ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ
Next Article RPF constable ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up