1.ಹುಬ್ಬಳ್ಳಿ ಐಬಿಯಲ್ಲಿ ನಡೆದ ಪೂರ್ವ ಭಾವಿ ಸಭೆ
ಹುಬ್ಬಳ್ಳಿ ಐಬಿಯಲ್ಲಿ ಹಲವು ಸಂಘಟನೆಗಳು ಸೇರಿಕೊಂಡು ಟೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಹೋರಾಟ ಮಾಡಲು ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿತ್ತು .
2.ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ
ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 93.90 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ 93.57 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಸೆಕೆಂಡ್ ಆಗಿದೆ. ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಟಾಪ್ 10 ಸ್ಥಾನಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣ, ಕೊಡಗು, ಬೆಂಗಳೂರು ಉತ್ತರ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ ಕ್ರಮವಾಗಿ ಪಡೆದುಕೊಂಡಿದೆ.
3.28 ಗಂಟೆ ಶೂಟ್ : ದರ್ಶನ್ಗೆ ಮತ್ತೆ ಶುರುವಾಯ್ತು ಬೆನ್ನು ನೋವು
ನಟ ದರ್ಶನ್ ಅವರು ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಬೆನ್ನು ನೋವಿಗೆ ಫಿಸಿಯೋ ಥೆರೆಪಿ ಮಾಡಿಸಿಕೊಳ್ಳುತ್ತಾ, ಅಗತ್ಯ ಮೆಡಿಕೇಷನ್ ಮಾಡುತ್ತಾ ದರ್ಶನ್ ಸೆಟ್ಗೆ ಮರಳಿದ್ದಾರೆ. ಈಗ 28 ಗಂಟೆ ನಿರಂತರ ಶೂಟ್ನಿಂದಾಗಿ ದರ್ಶನ್ ಅವರಿಗೆ ಮತ್ತೆ ಬೆನ್ನು ನೋವು ಅತಿಯಾಗಿದೆ ಎಂಬ ವರದಿ ಹರಿದಾಡಿದೆ.
4.ಸೌರಶಕ್ತಿ ಮತ್ತು ವಾಯುಶಕ್ತಿ ಉತ್ಪಾದನೆಯಲ್ಲಿ ಜರ್ಮನಿಯನ್ನು ಹಿಂದಿಕ್ಕಿದ ಭಾರತ
ಭಾರತ ಈಗ ಸೌರಶಕ್ತಿ ಮತ್ತು ವಾಯುಶಕ್ತಿ ಆಧಾರಿತ ವಿದ್ಯುತ್ ಉತ್ಪಾದನೆಯಲ್ಲಿ ವಿಶ್ವದ ಮೂರನೇ ಅತಿದೊಡ್ಡ ದೇಶವಾಗಿದೆ. ಎಂಬರ್ ಸಂಘಟನೆಯ ಗ್ಲೋಬಲ್ ಎಲೆಕ್ಟ್ರಿಸಿಟಿ ರಿವ್ಯೂ ವರದಿ ಪ್ರಕಾರ 2024ರಲ್ಲಿ ರಿನಿವಬಲ್ ಎನರ್ಜಿ ತಯಾರಿಕೆಯಲ್ಲಿ ಜರ್ಮನಿಯನ್ನು ಭಾರತ ಹಿಂದಿಕ್ಕಿದೆ.
5.ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ
ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದ್ದು ಜಾತ್ರಾಮಹೋತ್ಸವ ಏ.2 ರಿಂದ ಏ.14ರ ಶೇರ್ತಿ ಸೇವೆಯವರೆಗೆ 14 ದಿನಗಳ ಕಾಲ ನಡೆಯಲಿದೆ. ಉತ್ಸವದ ಪ್ರಮುಖ ಆಕರ್ಷಣೆ ವೈರಮುಡಿ ಕಿರೀಟಧಾರಣ ಮಹೋತ್ಸವ ಏ.7ರ ಸೋಮವಾರ ರಾತ್ರಿ 8.30ಕ್ಕೆ ಆರಂಭವಾಗಲಿದೆ. ನಂತರ ಬೆಳಗಿನ 4 ಗಂಟೆವರೆಗೆ ವೈರಮುಡಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ.
6.ಮಿನರಲ್ ವಾಟರ್ ಬಾಟಲ್ ಗಳಲ್ಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ
ಮಿನರಲ್ ವಾಟರ್ ಬಾಟಲ್ ಗಳಲ್ಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿಯಿಂದ ಬಹಿರಂಗವಾಗಿದೆ. 296 ಕುಡಿಯುವ ನೀರಿನ ಬಾಟಲ್ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 72 ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ, 88 ಮಾದರಿಗಳು ಕಳಪೆ ಗುಣಮಟ್ಟದ್ದಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ 115 ವಾಟರ್ ಬಾಟಲ್ ಕಂಪನಿಗಳಿಗೆ ನೋಟಿಸ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.
7.‘ದಿ ರಾಜಾ ಸಾಬ್’ ನಿರ್ದೇಶಕನ ಮೇಲೆ ಪ್ರಭಾಸ್ ಅಭಿಮಾನಿಗಳ ಆಕ್ರೋಶ
ಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಕಳೆದ ವರ್ಷ ಜೂನ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಈ ವರ್ಷ ಜನವರಿಯಲ್ಲಿ ಪ್ರಭಾಸ್ ನಟನೆಯ ಹೊಸ ಸಿನಿಮಾ ‘ದಿ ರಾಜಾ ಸಾಬ್’ ಬಿಡುಗಡೆ ಆಗಬೇಕಿತ್ತು, ಆದರೆ ಈ ವರೆಗೆ ಆಗಿಲ್ಲ. ಈಗ ಸಿನಿಮಾದ ನಿರ್ದೇಶಕ ಮಾರುತಿ, ಬಿಡುಗಡೆಗೆ ಇನ್ನಷ್ಟು ಸಮಯ ಕೇಳಿದ್ದಾರೆ. ಇದು ಪ್ರಭಾಸ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
8.ಸುಪ್ರೀಂ ಕೋರ್ಟ್ ತೀರ್ಪಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ
ತಮಿಳುನಾಡು ರಾಜ್ಯಪಾಲರು 10 ಮಸೂದೆಗಳನ್ನು ಕಾಯ್ದಿರಿಸಿದ ಕುರಿತು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರ ಮಸೂದೆ ಅನುಮೋದನೆ ವಿಳಂಬದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ರಾಜ್ಯ ಸ್ವಾಯತ್ತತೆಗೆ ದೊರೆತ ಮಹತ್ವದ ಗೆಲುವು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶ್ಲಾಘಿಸಿದ್ದಾರೆ.
9.ನಾಲ್ವರಿಗೆ ಗೇಟ್ಪಾಸ್, 3 ಹೊಸ ಬೌಲರ್ಗಳಿಗೆ ಅವಕಾಶ
ಶ್ರೀಲಂಕಾದಲ್ಲಿ ನಡೆಯಲಿರುವ ತ್ರಿಕೋನ ಸರಣಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದೆ. ಹರ್ಮನ್ಪ್ರೀತ್ ಕೌರ್ ನಾಯಕಿಯಾಗಿರುವ 15 ಸದಸ್ಯರ ತಂಡದಲ್ಲಿ ಮೂವರು ಹೊಸ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದೆ. ಶಫಾಲಿ ವರ್ಮಾ ಸೇರಿದಂತೆ ನಾಲ್ವರು ಆಟಗಾರ್ತಿಯರನ್ನು ತಂಡದಿಂದ ಕೈಬಿಡಲಾಗಿದೆ.
10.ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆ ಮಾಡಿರುವ ಪತ್ನಿ
ಸರ್ಕಾರಿ ಉದ್ಯೋಗ ಹಾಗೂ ಸವಲತ್ತುಗಳನ್ನು ಪಡೆಯುವ ದುರಾಸೆಯಲ್ಲಿ ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನಜೀಬಾಬಾದ್ನಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಹುದ್ದೆಯ ಆಸೆಯಲ್ಲಿ ಪತಿಯನ್ನು ಕೊಲೆ ಮಾಡಿದ್ದಾಳೆ. ಆದರೆ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಆಕೆ ಹೇಳಿದ್ದಳು, 29 ವರ್ಷದ ದೀಪಕ್ ಕುಮಾರ್ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ವರದಿ ದೃಢಪಡಿಸಿದೆ

