1.ಪ್ಲಾಸ್ಟಿಕ್ ಕವರ್ ನಲ್ಲಿ ಪ್ಯಾಕ್ ಮಾಡಿ ಗಾಂಜಾ ಮಾರಟ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ತುಮಕೂರಿನ ಇಸ್ಮಾಯಿಲ್ ನಗರದ 21 ವರ್ಷದ ಡ್ರಗ್ ಪೆಡ್ಲರ್ ವಸೀಮ್ ಪಾಷಾನನ್ನು ಬಂಧಿಸಿ 50ಸಾವಿರ ರೂಪಾಯಿ ಬೆಲೆಬಾಳುವ 1ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
2.ಸರಕಾರಿ ಆಸ್ಪತ್ರೆಗೆ ದಿಡೀರನೆ ಭೇಟಿ ನೀಡಿದ ಶಾಸಕರು
ಶಾಸಕರದಂತಹ ಸನ್ಮಾನ್ಯ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಅವರು ಬಾದಾಮಿ ನಗರದಲ್ಲಿರುವ ಸರಕಾರಿ ಆಸ್ಪತ್ರೆಗೆ ದಿಡೀರನೆ ಭೇಟಿ ನೀಡಿ ಸ್ವಚ್ಚತೆ ಹಾಗೂ ರೋಗಿಗಳಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಇರೋದನ್ನು ಕಂಡ ಅವ್ರು ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಇನ್ನುಮುಂದೆ ಇಂತಹ ಘಟನೆಗಳು ನಡೆಯಬಾರದೆಂದು ಎಚ್ಚರಿಕೆ ನೀಡಿದರು
3.ಜಿಮ್ನಲ್ಲಿ ವರ್ಕೌಟ್ ಮಾಡುವಾಗ ರಶ್ಮಿಕಾ ಕಾಲಿಗೆ ಗಾಯ
ನಟಿ ರಶ್ಮಿಕಾ ಮಂದಣ್ಣ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಕಾಲಿಗೆ ಗಾಯ ಮಾಡಿಕೊಂಡಿದ್ದು, ಪುಷ್ಪಾದ ಶ್ರೀವಲ್ಲಿ ಈಗ ಬೆಡ್ ರೆಸ್ಟ್ ಮಾಡುತ್ತಿದ್ದಾರೆ.ಈ ಸಂಬಂಧ ಇನ್ಸ್ಟಾದಲ್ಲಿ ಗಾಯಗೊಂಡಿರುವ ಕಾಲಿನ ಭಾಗದ ಫೋಟೋ ಅಪ್ಲೋಡ್ ಮಾಡಿ ಚಿತ್ರದ ನಿರ್ದೇಶಕರ ಬಳಿ ಕ್ಷಮೆ ಕೇಳಿದ್ದಾರೆ.ನನ್ನ ಕಾಲಿನ ನೋವು ಗುಣವಾದ ಬಳಿಕ ನಾನು ಥಾಮ, ಸಿಕಂದರ್ ಮತ್ತು ಕುಬೇರ ಸೆಟ್ಗೆ ಮರಳುತ್ತೇನೆ. ಈ ವಿಳಂಬಕ್ಕೆ ಕ್ಷಮೆ ಕೋರುತ್ತೇನೆ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
4.ಹಸುಗಳ ಕೆಚ್ಚಲು ಕೊಯ್ದ ಕಿಡಿಗೇಡಿಗಳು : ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಕ್ರೋಶ
ಕಿಡಿಗೇಡಿಗಳು ರಾತ್ರಿ ಹೊತ್ತು ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ. ಸದ್ಯ ಈಗ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಈ ಭಾಗದಲ್ಲಿ ಡ್ರಗ್ಸ್, ಗಾಂಜಾ ಸೇವನೆ ಹೆಚ್ಚಿದ್ದರೂ ಪೊಲೀಸರು ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಎಂದು ದೂರಿದ್ದಾರೆ.
5.ರಸ್ತೆ ಅಪಘಾತ, ಬಾಲಕ ಸ್ಥಳದಲ್ಲೇ ಸಾವು
ದ್ವಿಚಕ್ರ ವಾಹನದಲ್ಲಿ ಮಾವನ ಜೊತೆ ಹೋಗುತ್ತಿದ್ದಾಗ ಹಿಂಬದಿಯಿಂದ ಏಕಾಏಕಿ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪಿದ ಘಟನೆ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ನಡೆದಿದೆ . ತಲೆಯ ಮೇಲೆ ಟ್ರಕ್ನ ಎರಡು ಚಕ್ರ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ .
6.ರಾಯಬಾಗ ಪಟ್ಟಣದಲ್ಲಿ ಆಯೋಜಿಸಿದ ಇಸ್ತಮಾ ಕೂಟ
ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದಲ್ಲಿ ಆಯೋಜಿಸಿದ ಇಸ್ತಮಾ ಕೂಟ ದಲ್ಲಿ ಬಾಗವಹಿಸಿದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ್ ಸತೀಶ ಜಾರಕಿಹೊಳಿ ಅವರು ಸಮಸ್ತ ಮುಸಲ್ಮಾನ್ ಬಾಂಧವರಿಗೆ ಶುಭ ಕೋರುವ ಮೂಲಕ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
7.ಇಂದಿನಿಂದ ಮಹಾಕುಂಭ ಮೇಳ ಆರಂಭ
ಮಹಾಕುಂಭ ಮೇಳವು ಇಂದಿನಿಂದ ಪ್ರಯಾಗರಾಜ್ನಲ್ಲಿ ಪ್ರಾರಂಭವಾಗಿದ್ದು, ಇದು ಮಹಾಶಿವರಾತ್ರಿಯಂದು ಫೆಬ್ರವರಿ 26 ರಂದು ಕೊನೆಗೊಳ್ಳಲಿದೆ. ಈ ಮಹಾಕುಂಭ ಜಾತ್ರೆಯಲ್ಲಿ ಪುಣ್ಯನದಿಯಲ್ಲಿ ಸ್ನಾನ ಮಾಡಲು ದೂರದೂರುಗಳಿಂದ ಭಕ್ತರು ಆಗಮಿಸುತ್ತಾರೆ. ಮಹಾಕುಂಭ ಸ್ನಾನವು ಎಲ್ಲಾ ರೀತಿಯ ತೊಂದರೆಗಳನ್ನು ತೊಡೆದುಹಾಕುತ್ತದೆ ಮತ್ತು ಪಾಪಗಳಿಂದ ಮುಕ್ತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ.
8.ಹೆಲ್ಮೆಟ್ ಹಾಕದಿದ್ರೆ ಪೆಟ್ರೋಲ್ ಇಲ್ಲ
ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ ಅಂತ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ರಸ್ತೆ ಅಪಘಾತ ಕಡಿಮೆ ಮಾಡುವ ಮತ್ತು ದ್ವಿಚಕ್ರ ವಾಹನಗಳ ಅಪಘಾತದಿಂದ ಸಂಭವಿಸುವ ಸಾವು-ನೋವಿನ ಪ್ರಮಾಣ ಕಡಿಮೆ ಮಾಡಲು ಸಾರಿಗೆ ಇಲಾಖೆ ಈ ನೂತನ ಕ್ರಮ ಕೈಗೊಂಡಿದೆ.
9.ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಚೇತರಿಕೆ
ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಕಳೆದ ಕೆಲ ತಿಂಗಳಿಂದ ಅನಾರೋಗ್ಯದ ಕಾರಣ ಸುದ್ದಿಯಲ್ಲಿದ್ದರು.ಆದರೆ ಚಿಕಿತ್ಸೆಯ ಬಳಿಕ ವಿನೋದ್ ಕಾಂಬ್ಳಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಅವರ ಆರೋಗ್ಯದ ಮಾಹಿತಿ ಕೂಡ ಹೊರಬಿದ್ದಿರಲಿಲ್ಲ. ಇದೀಗ ಅವರ ಆರೋಗ್ಯದಲ್ಲಿ ಮಹತ್ವದ ಬದಲಾವಣೆಯಾಗಿರುವುದು ಕಂಡು ಬಂದಿದೆ. ಅದರಲ್ಲೂ ಕಳೆದ ಕೆಲ ವರ್ಷಗಳಿಂದ ಸೊರಗಿದ್ದ ಕಾಂಬ್ಳಿ ಇದೀಗ ಮತ್ತೆ ಹಳೆಯ ಖದರ್ನಲ್ಲಿ ಕಾಣಿಸಿಕೊಂಡಿದ್ದಾರೆ.
10.ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ
ದಾಸರಹಳ್ಳಿಯ ಚೊಕ್ಕಸಂದ್ರದ ದಿಜುಧಾರ್ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಸ್ಫೋಟದ ತೀರ್ವತೆಗೆ ಎದುರು ಮನೆಯವರಿಗೂ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

