1.ನಿಜಶರಣ ಅಂಬಿಗರ ಚೌಡಯ್ಯ ಜಯಂತಿ
ಕುಣಿಗಲ್ ಪಟ್ಟಣದ ತಾಲೂಕು ಸಭಾಂಗಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು,ಗಂಡುಗಲಿ ಶರಣ ಎಂದರೆ ಅಂಬಿಗ ಚೌಡಯ್ಯ ಯಾವುದನ್ನು ಕ್ಷಣ ಮಾತ್ರಕ್ಕೆ ಒಪ್ಪಿಕೊಳ್ಳದೆ ಸತ್ಯದ ಪರವಾಗಿ ಸದಾ ನಿಂತವರು ಅವರಲ್ಲಿದ್ದ ಜಾಣ ಅಪಾರ . ಕಾಯಕವನ್ನೇ ಉಸಿರಾಗಿಸಿಕೊಂಡಿದ್ದ ಅನುಭವ ಜೀವಿ ಅವರಾಗಿದ್ದರು, ಎಂದು ತಹಶೀಲ್ದಾರ್ ರಶ್ಮಿ ಯು ರವರು ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕ್ ಗಂಗಮತ ಸಂಘದ ಅಧ್ಯಕ್ಷ ಮನು, ತುಮಕೂರು ಜಿಲ್ಲಾ ಕಾಂಗ್ರೆಸ್ ಮೀನುಗಾರರ ವಿಭಾಗದ ಅಧ್ಯಕ್ಷರಾದ ಗೋವಿಂದರಾಜು, ಹಾಗೂ ಹಲವಾರು ಸಮಾಜದ ಮುಖಂಡರುಗಳು ಹಾಜರಿದ್ದರು
ಕುಣಿಗಲ್ ಪಟ್ಟಣದಲ್ಲಿ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ
2.ಕೋಲಾರ ಜಿಲ್ಲಾ ದಂಡಧಿಕಾರಿಗಳ ರೌಂಡ್ಸ್
ಕೋಲಾರ ಜಿಲ್ಲಾ ದಂಡಧಿಕಾರಿಗಳು MR ರವಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ವೇಮಗಲ್ನಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ, ಶೆಟ್ಟಿಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರದ ದರ್ಗಾ ಮೊಹಲ್ಲಾದ ಸಮುದಾಯ ಆರೋಗ್ಯ ಕೇಂದ್ರ , ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಮತ್ತು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲನೇ ನಡೆಸಿದರು
3.ಬಿಜೆಪಿಯಿಂದ ಎರಡನೇ ಪ್ರಣಾಳಿಕೆ ಬಿಡುಗಡೆ
ಬಿಜೆಪಿಯಿಂದ ಎರಡನೇ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಅಂಗನವಾಡಿ ಶಿಕ್ಷಣದಿಂದ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ: ಆಟೋ – ಟ್ಯಾಕ್ಸಿ ಚಾಲಕರ ಕಲ್ಯಾಣ ಮಂಡಳಿ ರಚನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವವರಿಗೆ 15 ಸಾವಿರ ಆರ್ಥಿಕ ನೆರವು ನೀಡುವುದಾಗಿ ಬಿಜೆಪಿ ನಾಯಕ ಅನುರಾಗ್ ಠಾಕೂರ್ ಭರವಸೆ ನೀಡಿದ್ದಾರೆ.
4.ಮುನಿರತ್ನ ಮೇಲೆ ಮತ್ತೊಂದು FIR
ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ಗಂಭೀರ ಆರೋಪದ ದೂರು ನೀಡಲಾಗಿದೆ.
5.ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮ
ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಶಿವೈಕ್ಯ ಡಾ.ಶಿವಕುಮಾರ ಶ್ರೀಗಳು ಅಗಲಿ 6 ವರ್ಷಗಳೇ ಕಳೆದು ಹೋಗಿವೆ . ಇದರ ಸ್ಮರಣಾರ್ಥವಾಗಿ ಜನವರಿ .21ರಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
6.ಆಸ್ಪತ್ರೆಯಿಂದ ಸೈಫ್ ಅಲಿ ಖಾನ್ ಡಿಸ್ಚಾರ್ಜ್
ಚೂರಿ ಇರಿತದಲ್ಲಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರು ಬಹುತೇಕ ಚೇತರಿಸಿಕೊಂಡಿದ್ದಾರೆ. ಹಾಗಾಗಿ ಅಭಿಮಾನಿಗಳು ಆತಂಕಪಡುವ ಅಗತ್ಯ ಇಲ್ಲ. ಆಸ್ಪತ್ರೆಯಿಂದ ಹೊರಬರುವಾಗ ಸೈಫ್ ಅಲಿ ಖಾನ್ ಅವರು ನಗುತ್ತಾ ಜನರ ಕಡೆಗೆ ಕೈ ಬೀಸಿದ್ದಾರೆ. ಅವರ ಮುಖದಲ್ಲಿ ನಗು ನೋಡಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.
7.ಬೆಂಗಳೂರಿನ ಕೆಆರ್ ಪುರಂನಲ್ಲೂ ದರೋಡೆ ಗ್ಯಾಂಗ್ ಪ್ರತ್ಯಕ್ಷ
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದರೋಡೆ, ಕಳ್ಳತನ ಪ್ರಕರಣಗಳು ದಿನದಿನಕ್ಕೂ ಹೆಚ್ಚಾಗುತ್ತಿವೆ. ಕೆಆರ್ ಪುರಂನಲ್ಲೂ ದರೋಡೆ ಗ್ಯಾಂಗ್ ಪ್ರತ್ಯಕ್ಷವಾಗಿದ್ದು,ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಮನೆ ಕಳ್ಳತನಕ್ಕೆ ಸ್ಕೆಚ್ ಹಾಕಿದೆ. ಈ ಗ್ಯಾಂಗ್ನ ಮೂವರು ಕಿತ್ತಗನೂರಿನಲ್ಲಿ ರಾಜಾರೋಷವಾಗಿ ಮನೆಗಳ ಬಳಿ ಓಡಾಡೋದು ಕಂಡು ಬಂದಿದೆ
8.ಪೊಲೀಸರಿಗೆ ಗನ್ ಸರೆಂಡರ್ ಮಾಡಿದ ದರ್ಶನ್
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು 2ನೇ ಆರೋಪಿ ಆಗಿದ್ದು, ಅವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ದರ್ಶನ್ ಅವರಿಗೆ ಜಾಮೀನು ಸಿಕ್ಕಿದ್ದರೂ ಕೂಡ ಕೆಲವು ನಿರ್ಬಂಧಗಳು ಇವೆ. ಗಂಭೀರ ಪ್ರಕರಣದಲ್ಲಿ ಅವರು ಆರೋಪಿ ಆಗಿರುವ ಕಾರಣ ಗನ್ ಬಳಸಲು ನಿರ್ಬಂಧ ವಿಧಿಸಲಾಗಿದೆ. ಹೌದು, ಸೆಲೆಬ್ರಿಟಿ ಆಗಿರುವ ಕಾರಣದಿಂದ ದರ್ಶನ್ ಅವರು ತಮ್ಮ ರಕ್ಷಣೆಗಾಗಿ ಗನ್ ಲೈಸೆನ್ಸ್ ಪಡೆದಿದ್ದರು. ಆದರೆ ಈಗ ಅವರು ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ್ದಾರೆ. ಇತ್ತೀಚೆಗೆ ಅವರ ಗನ್ ಲೈನ್ಸ್ ಕ್ಯಾನ್ಸಲ್ ಮಾಡಲಾಗಿದೆ.
9.ಆಸ್ಪತ್ರೆಯ ಎದುರೇ ಬಾಗಿಲು ತೆಗೆಯಲಾಗದೆ ಮಹಿಳೆ ಸಾವು
ಆ್ಯಂಬುಲೆನ್ಸ್ ಅಂದ್ರೆ ಜೀವರಕ್ಷಕ. ಯಾವುದೇ ಕಠಿಣ ಪರಿಸ್ಥಿತಿಯಲ್ಲೂ ಈ ಆ್ಯಂಬುಲೆನ್ಸ್ಗಳು ಜನರ ಸಹಾಯಕ್ಕೆ ಬರುತ್ತದೆ. ಇನ್ನು ಸರ್ಕಾರ ಕೂಡ ಜನರ ನೆರವಿಗಾಗಿ ಹಲವು ಯೋಜನೆಗಳನ್ನು ತಂದಿದೆ. ಈ ಮಧ್ಯೆ ಜನರ ಜೀವ ರಕ್ಷಣೆ ಮಾಡಬೇಕಿದ್ದ ಆ್ಯಂಬುಲೆನ್ಸ್ನಿಂದಲೇ ಇಲ್ಲೊಬ್ಬರು ಮಹಿಳೆಯ ಪ್ರಾಣವೇ ಹೋಗಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ತುರ್ತಾಗಿ ಕುಟುಂಬದವರು ಆ್ಯಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದ್ರೆ ಆಕೆಯ ದುರಾದೃಷ್ಟವೆಂಬಂತೆ ಆಸ್ಪತ್ರೆಗೆ ತಲುಪುತ್ತಿದ್ದಂತೆ ಬಾಗಿಲು ಓಪನ್ ಆಗಲೇ ಇಲ್ಲ.
10.’ಪ್ರಿಯಾಂಕಾ ಗಾಂಧಿ ನಮ್ಮ ಕಿತ್ತೂರು ರಾಣಿ’ ಎಂದ ಖರ್ಗೆ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರನ್ನು ಹಾಡಿ ಹೊಗಳಿದ್ದಾರೆ. ಬೆಳಗಾವಿಯಲ್ಲಿ ನಡೆದ ‘ಗಾಂಧಿ ಭಾರತ’ ಸಮಾವೇಶ ಉದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಿಯಾಂಕಾ ಗಾಂಧಿಯವರನ್ನು ಕಿತ್ತೂರು ವೀರರಾಣಿ ಚೆನ್ನಮ್ಮಗೆ ಹೋಲಿಸಿದ್ದಾರೆ. ಅತ್ತ ಮಲ್ಲಿಕಾರ್ಜುನ್ ಖರ್ಗೆ ಪ್ರಿಯಾಂಕಾ ಗಾಂಧಿ ಅವರನ್ನು ಕಿತ್ತೂರು ರಾಣಿ ಚೆನ್ನಮ್ಮಗೆ ಹೋಲಿಸಿದ್ರೆ, ಇತ್ತ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಿತ್ತೂರು ರಾಣಿ ಚೆನ್ನಮ್ಮ ವೀರ ಮಹಿಳೆ. ಅವರನ್ನು ನಕಲಿ ಕಾಂಗ್ರೆಸ್ಗೆ ಹೊಲಿಕೆ ಮಾಡುವುದು ತಪ್ಪು ಎಂದಿದ್ದಾರೆ.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

