1.ಇದು ರಾಜಕೀಯ ಮಾಡುವ ಸಮಯವಲ್ಲ: ಯದುವೀರ್ ಒಡೆಯರ್
ಮೈಸೂರು ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಮಂಗಳವಾರದಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಭದ್ರತೆ ಲೋಪ ಕಾರಣವೋ ಇಲ್ಲವೋ ಅನ್ನೋದು ಪರಿಶೀಲನೆ ನಡೆದ ನಂತರ ಗೊತ್ತಾಗುತ್ತದೆ, ಆದರೆ ಸದ್ಯಕ್ಕೆ ನಾವು ಪಾಕಿಸ್ತಾನ ಬೆಚ್ಚಿ ಬೀಳುವ ಪ್ರತಿಕ್ರಿಯೆ ನೀಡಬೇಕಿದೆ, ಅದನ್ನು ನಮ್ಮ ವರಿಷ್ಠರು ಮಾಡುತ್ತಿದ್ದಾರೆ, ಎಂದು ಹೇಳಿದರು
2.ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅವರಿಗೆ ಅರ್ಥವಾಗುವ ಅವರದ್ದೇ ಭಾಷೆಯಲ್ಲಿ ನಮ್ಮ ಸೇನೆಯು ಕೆಲವೇ ದಿನಗಳಲ್ಲಿ ಉತ್ತರ ನೀಡಲಿದೆ ಎಂಬ ವಿಶ್ವಾಸ ನನಗೆ ಇದೆ. ಈಗಾಗಲೇ ಸಿಂಧೂ ನದಿಯ ನೀರನ್ನು ನಿಲ್ಲಿಸಿದ್ದಾರೆ. ಆ ಪಾಪಿಗಳು ಮಾಡಿರುವುದು ಅತ್ಯಂತ ಹೇಡಿ ಕೃತ್ಯ. ನಮ್ಮ ‘ಮಾರ್ಟಿನ್’ ಸಿನಿಮಾದ ಚಿತ್ರೀಕರಣವನ್ನು ಪಹಲ್ಗಾಮ್ ನಲ್ಲಿ ಮಾಡಿದ್ದಾಗಿ ಧ್ರುವ ಸರ್ಜಾ ನೆನಪು ಮಾಡಿಕೊಂಡಿದ್ದಾರೆ.
3.IAF ಅಧಿಕಾರಿ ವಿರುದ್ದ ಬಲವಂತ ಕ್ರಮಕೈಗೊಳ್ಳದಂತೆ ‘ಹೈ’ ನಿರ್ದೇಶನ
ರಾಷ್ಟ್ರಮಟ್ಟದಲ್ಲಿ ಚರ್ಚೆ ಗ್ರಾಸವಾಗಿದ್ದ ಬೆಂಗಳೂರಿನ ರಸ್ತೆಯೊಂದರಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ ದಾಖಲಾಗಿರುವ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳದಂತೆ ಬೆಂಗಳೂರು ನಗರ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ.
4.ಮುತ್ತಪ್ಪ ರೈ ಎರಡನೇ ಪತ್ನಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್!
ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ತಾಲ್ಲೂಕಿನ ಬಿಡದಿ ಬಳಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಮಂಗಳವಾರ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಅವರಿಗೆ ರಿಲೀಫ್ ನೀಡಿದೆ.
5.ಭಟ್ಕಳದಲ್ಲಿದ್ದಾರೆ 15 ಮಂದಿ ಪಾಕಿಸ್ತಾನಿ ಪ್ರಜೆಗಳು: ಸದ್ಯಕ್ಕಿಲ್ಲ ಗಡಿಪಾರು
ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು 48 ಗಂಟೆ ಕೇಂದ್ರ ಸರ್ಕಾರ ಗಡುವು ನೀಡಿದೆ. ಆದರೆ, ಭಟ್ಕಳದಲ್ಲಿ 15 ಮಂದಿ ಪಾಕಿಸ್ತಾನಿ ಪ್ರಜೆಗಳಿದ್ದು, ಅವರೆಲ್ಲರೂ ದೀರ್ಘಾವಧಿ ವೀಸಾ ಹೊಂದಿರುವುದರಿಂದ ಭಾರತದಲ್ಲೇ ನೆಲೆಸಲಿದ್ದಾರೆಂದು ತಿಳಿದುಬಂದಿದೆ. ಹೀಗಾಗಿ ಅವರನ್ನು ಗಡಿಪಾರು ಅವರನ್ನು ವಾಪಸ್ ಕಳುಹಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಅವರು ಹೇಳಿದ್ದಾರೆ.
6.ಇಬ್ಬರು ಡಕಾಯಿತರಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ನಗರದ ರಿಂಗ್ ರಸ್ತೆಯ SBI ಎಟಿಎಂ ಧ್ವಂಸಗೊಳಿಸಿ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕಲಬುರಗಿ ಹೊರವಲಯದ ಬೇಲೂರು ಕ್ರಾಸ್ ಕೈಗಾರಿಕಾ ಪ್ರದೇಶದ ಪೂಜಾರಿ ಚೌಕ್ ಬಳಿ ಏಪ್ರಿಲ್ 9 ರಂದು ಎಸ್ಬಿಐ ಎಟಿಎಂ ಲೂಟಿ ಮಾಡಿದ ಆರೋಪಿಗಳನ್ನು ಪೊಲೀಸ್ ತಂಡ ಪತ್ತೆ ಮಾಡಿದೆ.
7.ಮೃತ ಮಾಲೀಕರ ಹೆಸರಿನಲ್ಲಿವೆ ರಾಜ್ಯದ ಶೇ. 23ಕ್ಕೂ ಹೆಚ್ಚು ಭೂ ದಾಖಲೆಗಳು
ಭೂಮಿ ಹಕ್ಕುಗಳು, ಹಿಡುವಳಿ ಮತ್ತು ಬೆಳೆಗಳ ದಾಖಲೆ ಯೊಂದಿಗೆ ಆಧಾರ್ ಲಿಂಕ್ ಮಾಡುವ ಅಭಿಯಾನವನ್ನು ರಾಜ್ಯ ಸರ್ಕಾರ ಆರಂಭಿಸಿದೆ, ಇದೇ ವೇಳೆ ಭೂ ಮಾಲೀಕತ್ವಕ್ಕೆ ಸಂಬಂಧಿಸಿದ ಶೇ. 23% ಕ್ಕಿಂತ ಹೆಚ್ಚು ದಾಖಲೆಗಳು ಮೃತ ಮಾಲಿಕರ ಹೆಸರಿನಲ್ಲಿವೆ ಎಂದು ತಿಳಿದು ಬಂದಿದೆ.
8.ಜಾತಿ ಗಣತಿ ಯಾವುದೇ ಸಮುದಾಯದ ವಿರುದ್ಧ ಅಲ್ಲ
ಸ್ವಾತಂತ್ರ್ಯದ 75 ವರ್ಷಗಳ ನಂತರವೂ ನಿಜವಾದ ಸಾಮಾಜಿಕ ನ್ಯಾಯವನ್ನು ಸಾಧಿಸಲಾಗಿಲ್ಲ, ಅಂಚಿನಲ್ಲಿರುವ ಸಮುದಾಯಗಳ ಜೀವನ ಪರಿಸ್ಥಿತಿಗಳನ್ನು ಅರ್ಥಮಾಡಿಕೊಳ್ಳಲು ಇಂತಹ ಸಮೀಕ್ಷೆಯ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
9.ಉಪಗ್ರಹ ಆಧಾರಿತ ಟೋಲ್ ಸಂಗ್ರಹಣೆ ಇನ್ನೂ ಕೆಲವು ವರ್ಷ ವಿಳಂಬ
ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್ಎಸ್ಎಸ್) ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳು ತಿಳಿಸಿದ್ದಾರೆ.
10.ಸಾಲು ಸಾಲು ಚಿತ್ರಗಳಲ್ಲಿ ಶಿವರಾಜ್ಕುಮಾರ್ ಬ್ಯುಸಿ
ನಟ ಶಿವರಾಜ್ಕುಮಾರ್ ಇದೀಗ ಹಲವು ವಿಭಿನ್ನ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅವರು ತಮ್ಮ 131ನೇ ಚಿತ್ರವಾದ ತೆಲುಗಿನ ನಟ ರಾಮ್ ಚರಣ್ ಅವರೊಂದಿಗೆ ಪ್ಯಾನ್-ಇಂಡಿಯಾ ಯೋಜನೆ, ರಜನಿಕಾಂತ್ ನಟಿಸಿರುವ ಬಹು ನಿರೀಕ್ಷಿತ ಜೈಲರ್ 2 ಮತ್ತು ನಿರ್ದೇಶಕ ಪವನ್ ಒಡೆಯರ್ ಅವರೊಂದಿಗೆ ಮುಂಬರುವ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

