1.ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮ
ಕಲಬುರಗಿ ನಗರದ ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯದ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೊಸದಾಗಿ ನೇಮಕವಾದ 67 VAOಗಳಿಗೆ ಆದೇಶ ಪತ್ರ ವಿತರಿಸಿದರು
2.”ಹೇಳೋದು ಆಚಾರ ತಿನ್ನೋದು ಬದನೆಕಾಯಿ”: ಹರ್ಷಾ ಎಸ್ ಗುತ್ತೇದಾರ
“ಹೇಳೋದು ಆಚಾರ ತಿನ್ನೋದು ಬದನೆಕಾಯಿ” ಇದು ಆಳಂದ ಕಾಂಗ್ರೆಸ್ ಶಾಸಕ B.R. ಪಾಟೀಲ್ ಅವರಿಗೆ ಸರಿಯಾಗಿ ಅನ್ವಯ ವಾಗುತ್ತೆ ಎಂದು ಹರ್ಷಾ ಎಸ್ ಗುತ್ತೇದಾರ ಹೇಳಿದ್ದಾರೆ . ಆಳಂದ ತಾಲ್ಲೂಕಿನಾದ್ಯಂತ ಬಡವರಿಂದ ಮನೆ ಹಾಕ್ತೀವಿ ಅಂತ ಹೇಳಿ ಕಾಂಗ್ರೆಸ್ ಮುಖಂಡರು ದುಡ್ಡು ಕಲೆಕ್ಟ್ ಮಾಡಿದ್ರು ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರೆಲ್ಲರೂ BR ಪಾಟೀಲ್ ಆಪ್ತರೆ ಆಗಿದ್ದಾರೆ 7 ತಿಂಗಳ ಹಿಂದೆ ಮನೆಗಳು ಮಂಜೂರಾಗಿತ್ತು ಅದರಲ್ಲಿ ಶಾಸಕರು ಲೆಟರ್ ಕೊಟ್ಟಿದ್ದ್ದು ತಮಗೆ ಬೇಕಾದವರಿಗೆ ಹಾಗಾಗಿ ಲಿಸ್ಟ್ ರದ್ದಾಗಬೇಕು , ಹೊಸದಾಗಿ ಅರ್ಹ ಫಲಾನುಭವಿಗಳ ಆಯ್ಕೆ ಆಗಬೇಕು , ಮನೆ ಇಲ್ಲದವರಿಗೆ ದುಡ್ಡಿಲ್ಲದೆ ಮನೆ ಸಿಗಬೇಕು ಎಂದು ಹೇಳಿದರು
3.ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ
ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಸಿ,ಎಂ ಸಿದ್ದರಾಮಯ್ಯನವರು, ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ. ಕರ್ನಾಟಕ 8.7% ಜಿಡಿಪಿಗೆ ಕೊಡುಗೆ ನೀಡುತ್ತಿದೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ ಎಂದು ತಿಳಿಸಿದರು
4.ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ
ಕೆಆರ್ಎಸ್ ಜಲಾಶಯದ ಒಳ ಹರಿವು ಭಾರೀ ಏರಿಕೆ ಕಂಡ ಹಿನ್ನೆಲೆ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಪ್ರವಾಸಿ ತಾಣಗಳಿಗೆ ನಿರ್ಬಂಧ ಹಾಕಲಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಜಲಾಶಯ, ಸದ್ಯ 121 ಅಡಿಯಷ್ಟು ನೀರು ತುಂಬಿ ಕಂಗೊಳಿಸುತ್ತಿದೆ. ಸದ್ಯ ಕೆಆರ್ಎಸ್ಗೆ 20,315ಕ್ಕೂ ಹೆಚ್ಚು ಒಳ ಹರಿವು ಇದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ನೀರಿನ ಮಟ್ಟ 50 ಕ್ಯೂಸೆಕ್ಗೆ ಏರಿಕೆಯಾಗುವ ಸಾಧ್ಯತೆ ಇದೆ.
5.ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆಯ ಆರ್ಭಟ
ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಚಾರ್ಮಾಡಿ ರಸ್ತೆ ಅಪಾಯದ ಸೂಚನೆ ನೀಡುತ್ತಿದ್ದು ರಸ್ತೆಯಲ್ಲಿ ಓಡಾಡೋದೇ ಕಷ್ಟವಾಗಿದೆ. ದಟ್ಟ ಮಂಜು ಆವರಿಸುತ್ತಿದ್ದು, ಘಾಟ್ನಲ್ಲಿ ರಸ್ತೆ ಕನಿಷ್ಠ ಐದು ಅಡಿ ದೂರ ಕೂಡ ಕಾಣುತ್ತಿಲ್ಲ. ಹೆಡ್ಲೈಟ್ ಹಾಕಿದ್ದರೂ 5 ಅಡಿ ದೂರ ಕಾಣದಂತಹ ಮಂಜು ಆವರಿಸಿದೆ.
6.ಬಹಳ ವರ್ಷಗಳ ಕರ್ನಾಟಕ ಭಕ್ತರ ಕನಸು ನಸಸಾಗಲಿದೆ
ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಛತ್ರ ಅಂದ್ರೆ ಮೈಸೂರು ಕಾಂಪ್ಲೆಕ್ಸ್ “ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್” ಕಲ್ಯಾಣ ಮಂಟಪವನ್ನು ಸಚಿವ ರಾಮಲಿಂಗಾರೆಡ್ಡಿ ಅವ್ರು ಉದ್ಘಾಟಿಸಿ ಮಾತನಾಡಿದರು 36 ಕೊಠಡಿಗಳ VIP ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದ ದೇವಸ್ಥಾನದ ಉದ್ಘಾಟನೆ ಸೆಪ್ಟೆಂಬರ್ ನಲ್ಲಿ ನಡೆಯಲಿದೆ. 36 ಸುಸಜ್ಜಿತ ಕೊಠಡಿಗಳ VIP ಬ್ಲಾಕ್ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣವಾಗಿದೆ. ಅಂತಿಮ ಹಂತದ ಕೆಲಸಗಳು ಪ್ರಗತಿಯಲ್ಲಿವೆ ಸೆಪ್ಟೆಂಬರ್ ವೇಳೆಗೆ ಪೂರ್ಷಗೊಳ್ಳಲಿದ್ದು, ಆಗ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು
7.210ಕ್ಕೂ ಹೆಚ್ಚು ಚಾರ್ಜಿಂಗ್ ಪಾಯಿಂಟ್ಗಳು ಲಭ್ಯ
ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗಿದ್ದು ಚಾರ್ಜಿಂಗ್ ಹಬ್ ಗಳು ಕೂಡ ಜಾಸ್ತಿಯಾಗ್ತಿದೆ ಹೌದು ಇದೀಗ ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಹಬ್ ಅನ್ನು ಒಂದನ್ನು ಉದ್ಘಾಟಿಸಲಾಗಿದೆ. ಬೇಗೂರು, ಚಿಕ್ಕನಹಳ್ಳಿ, ಬಂಡಿಕೊಡೇಹಳ್ಳಿ ಅಮಾನಿಕೆರೆಯಲ್ಲಿ 210ಕ್ಕೂ ಹೆಚ್ಚು ಚಾರ್ಜಿಂಗ್ ಪಾಯಿಂಟ್ಗಳು ಮತ್ತು 4 ಮೆಗಾವ್ಯಾಟ್ ಸಾಮರ್ಥ್ಯದೊಂದಿಗೆ ದೇಶದ ಏಕೈಕ ಅತ್ಯಂತ ಶಕ್ತಿಶಾಲಿ ಇವಿ ಚಾರ್ಜಿಂಗ್ ಸೌಲಭ್ಯವನ್ನು ಸ್ಥಾಪಿಸಲಾಗಿದೆ.
8.ಬಹಿರಂಗ ಹೇಳಿಕೆ ನೀಡುವ ಶಾಸಕರೇ ಹುಷಾರ್
ಭ್ರಷ್ಟಾಚಾರ ಆರೋಪ, ಕಮಿಷನ್ ಕಿತ್ತಾಟ, ಸಚಿವರ ಅಸಹಕಾರದ ಬಗ್ಗೆ ಕಾಂಗ್ರೆಸ್ ಶಾಸಕರ ಅಸಹನೆ ಜೋರಾಗಿತ್ತು. ಇದು ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿತ್ತು. ಇದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿಎಂ ಮೂಲಕ ವಾರ್ನಿಂಗ್ ಕಾಲ್ ರವಾನಿಸಿದ್ದಾರೆ.
9.ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಉತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಈ ಬಾರಿ ಭಕ್ತರಿಗೆ ಹಲವು ವಿಶೇಷ ಸೌಲಭ್ಯಗಳನ್ನು ನೀಡಲಾಗಿದ್ದು, ಕೆಲವು ನಿಯಮಗಳನ್ನು ಹೇರಲಾಗಿದೆ ಮುಖ್ಯವಾಗಿ ಚಾಮುಂಡೇಶ್ವರಿ ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ
10.ಹಿಮಾಚಲ ಪ್ರದೇಶದಲ್ಲಿ ರಣ ಭೀಕರ ಮಳೆ
ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದಲ್ಲದೆ ಹಲವೆಡೆ ಭೂಕುಸಿತ, ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಮೇಘಸ್ಫೋಟಕ್ಕೆ ಟನ್ಗಟ್ಟಲೆ ಮರಗಳು ನದಿಗೆ ಕೊಚ್ಚಿ ಹೋಗಿದೆ.

