1.ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಬಂದ್
ಬೆಂಗಳೂರು ಏರ್ ಶೋ ‘ಏರೋ ಇಂಡಿಯಾ 2025’ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ, ಏರ್ ಶೋ ವೇಳೆ ಅತ್ತ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪ್ರಯಾಣಿಕ ವಿಮಾನಗಳ ಹಾರಾಟದಲ್ಲಿ ತುಸು ವ್ಯತ್ಯಯಕ್ಕೂ ಕಾರಣವಾಗಲಿದೆ. ಏರ್ ಶೋ ನಡೆಯುವ ಸಂದರ್ಭಗಳಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಳ್ಳಲಿದೆ.
2.ಕೇರಳದಲ್ಲಿ ಹುಲಿಯ ಶವ ಪತ್ತೆ, ಹೊಟ್ಟೆಯೊಳಗಿತ್ತು ಮಹಿಳೆಯ ಕಿವಿಯೋಲೆ
ಕಳೆದ ಎರಡು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಹುಲಿ ಶವವಾಗಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ, ಕಿವಿಯೋಲೆ ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಾಫಿ ಬೀಜ ಸಂಗ್ರಹಿಸಲು ತೆರಳಿದ್ದ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
3.2025ರ ಹಂಪಿ ಉತ್ಸವದ ಲಾಂಛನ ಅನಾವರಣ
ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ 2025ರ ಹಂಪಿ ಉತ್ಸವದ ಲಾಂಛನವನ್ನ ವಿಜಯನಗರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅನಾವರಣಗೊಳಿಸಿದರು.ಫೆಬ್ರವರಿ 28 ರಿಂದ ಮಾರ್ಚ್ 1 ಮತ್ತು 2ನೇ ತಾರೀಖಿನವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದೆ. ಹೀಗಾಗಿ, ಕಳೆದ ಬಾರಿಗಿಂತಲೂ ಈ ಬಾರಿ ಇನ್ನಷ್ಟು ಅದ್ದೂರಿಯಾಗಿ ಮಾಡಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಳ್ಳುತ್ತಿದೆ.
4.ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿ
ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ದಿನಾಂಕ ನಿಗದಿಯಾಗಿದ್ದು ಈ ವರ್ಷ ಏಪ್ರಿಲ್ 4ರಿಂದ ಏಪ್ರಿಲ್ 14 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ.ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.
5.ಕೋಟೆಕಾರು ಬ್ಯಾಂಕ್ ದರೋಡೆ: ರಾಶಿ ರಾಶಿ ಚಿನ್ನ ಕಂಡು ಪೊಲೀಸರೇ ಶಾಕ್..!
ಜನವರಿ 17ರಂದು ಮಂಗಳೂರು ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡ್ನ ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಅತಿ ದೊಡ್ಡ ದರೋಡೆಯಾಗಿದ್ದು, ಈ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ದರೋಡೆ ರಾಷ್ಟ್ರಮಟ್ಟದಲ್ಲಿ ಸಂಚಲ ರೂಪಿಸಿತ್ತು. ಈ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. 18 ಕೆಜಿ ಚಿನ್ನ ಸಹಿತ 11 ಲಕ್ಷ ನಗದು ಮತ್ತು ರಾಶಿ ರಾಶಿ ಚಿನ್ನ, ಹಣ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.
6.ಸದ್ಯಕ್ಕಿಲ್ಲ ಮೆಟ್ರೋ ರೈಲು ಟಿಕೆಟ್ ದರ ಏರಿಕೆ
ಬೆಂಗಳೂರಿನ ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಿಸಲು ಬಿಎಂಆರ್ಸಿಎಲ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಶೇ 45ರಷ್ಟು ದರ ಏರಿಕೆಗೆ ಮುಂದಾಗಿದ್ದರೂ, ಆ ಬಗ್ಗೆ ಕೇಂದ್ರ ಸರ್ಕಾರ ವರದಿ ಕೋರಿದ್ದು, ಅನುಮೋದನೆ ನೀಡಿಲ್ಲ. ಕಳೆದ ವಾರವಷ್ಟೇ ಟಿಕೆಟ್ ದರ ಏರಿಕೆ ಸಂಬಂಧ ಬಿಎಂಆರ್ಸಿಎಲ್ ಸಭೆ ನಡೆಸಿತ್ತು. ಶೇ 45ರಷ್ಟು ದರ ಹೆಚ್ಚಳ ಮಾಡಲು ನಿರ್ಧರಿಸಿತ್ತು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ ಎನ್ನಲಾಗಿದೆ.
7.ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ. ಅರ್ಜಿ ಕೊಟ್ಟರೆ ಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುತ್ತೇವೆ. ಯಾಕಂದ್ರೆ ಅದು ಸಚಿವ ಸಂಪುಟಕ್ಕೆ ಹೋಗಬೇಕು. ಹಾಗಾಗಿ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಿದರು.
8.ಹುಬ್ಬಳ್ಳಿಯಲ್ಲಿ ಯುವಕನ ಕೊಲೆ: ಮೂವರು ಆರೋಪಿಗಳ ಕಾಲಿಗೆ ಗುಂಡೇಟು
ಹುಬ್ಬಳ್ಳಿಯಲ್ಲಿ ಆಕಾಶ್ ಕೊಲೆ ಪ್ರಕರಣದ ಮೂವರು ಆರೋಪಿಗಳ ಮೇಲೆ ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಇನ್ಸ್ಪೆಕ್ಟರ್ ಗಳು ಮತ್ತು ಇತರ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಕೊಲೆ ಹಿಂದೆ ಹಳೆಯ ದ್ವೇಷ ಇರಬಹುದು ಎಂದು ಶಂಕಿಸಲಾಗಿದೆ. 4 ಸುತ್ತು ಗಾಳಿಯಲ್ಲಿ , 5 ಸುತ್ತು ಗುಂಡುಗಳನ್ನು ಆರೋಪಿಗಳ ಕಾಲಿಗೆ ಹೊಡೆದು ಬಳಿಕ, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
9.ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿತ, 5 ಮಂದಿ ಸಾವು
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಸಂಭವಿಸಿದ ಅಪಘಾತದಲ್ಲಿ 6 ಭಕ್ತರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಗವಾನ್ ಆದಿನಾಥನ ಜೈನ ನಿವರ್ಣ ಲಡ್ಡೂ ಉತ್ಸವವನ್ನು ಬಾಗ್ಪತ್ನಲ್ಲಿ ಆಚರಿಸಲಾಯಿತು.ಸಂಘಟಕರು 65 ಅಡಿ ಎತ್ತರದ ಮರದ ವೇದಿಕೆಯನ್ನು ನಿರ್ಮಿಸಿ ಅದರ ಮೇಲೆ 4-5 ಅಡಿ ಎತ್ತರದ ಆದಿನಾಥನ ಪ್ರತಿಮೆಯನ್ನು ಹಾಕಿದ್ದರು ಎಂದು ಹೇಳಲಾಗುತ್ತಿದೆ. ಮಾನಸ್ತಂಭ ಕಾಂಪ್ಲೆಕ್ಸ್ನಲ್ಲಿ ಪೆಂಡಾಲ್ ಹಾಕಲಾಗಿತ್ತು, ಅದು ಕುಸಿದು ಬಿದ್ದು 50ಕ್ಕೂ ಹೆಚ್ಚು ಭಕ್ತರು ಅವಶೇಷಗಳಡಿ ಸಿಲುಕಿದ್ದಾರೆ. ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.
10.ಗುಲಾಬಿ ಹೂ ಹಿಡಿದು ಮತ್ತೆ ಹೊಸ ರೀಲ್ಸ್ ಶೇರ್ ಮಾಡಿದ ನಿವೇದಿತಾ ಗೌಡ!
ಬಿಗ್ ಬಾಸ್ ನಿವೇದಿತಾ ಗೌಡ ಮತ್ತು ಅವರ ತಾಯಿ ಆನೆ ಜೊತೆಗೆ ಸ್ನಾನ ಮಾಡಿರುವ ವಿಡಿಯೋ ಸಖತ್ ವೈರಲ್ ಆಗಿತ್ತು. ಇದನ್ನ ನೋಡಿದವ್ರು ಜಾಲಿ ಜಾಲಿ ಎಲ್ಲ ಜಾಲಿ ಅಂತಲೂ ಕಮೆಂಟ್ ಮಾಡಿದ್ದರು. ಆನೆ ಮೈ ತೊಳೆಯೋದನ್ನ ಅಮ್ಮ-ಮಗಳು ತುಂಬಾನೆ ಚೆನ್ನಾಗಿಯೇ ಎಂಜಾಯ್ ಮಾಡಿದ್ದಾರೆ. ಆನೆ ಮೇಲೆ ಕುಳಿತು ಖುಷಿ ಪಟ್ಟಿದ್ದರು.ಈಇದೀಗ ಫ್ಲವರ್ ರೀತಿಯ ಬಟ್ಟೆಯನ್ನು ಧರಿಸಿ ಹೂ ಹಿಡಿದು ರೀಲ್ಸ್ ಶೇರ್ ಮಾಡಿದ್ದಾರೆ. ಇದೀಗ ನಿವೇದಿತಾರ ಹೊಸ ರೀಲ್ಸ್ಗೆ ನೆಟ್ಟಿಗರು ಸುಸ್ತಾಗಿ ಹೋಗಿದ್ದಾರೆ.

