ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಕೃಷ್ಟಪ್ಪ(62) ಮೃತ ದುರ್ದೈವಿ. ಅಪಘಾತದಲ್ಲಿ 10 ಜನಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಇದನ್ನೂ ಓದಿ:ಬೆಂಗಳೂರಿನಲ್ಲಿ ಡೆಂಘಿ ಪ್ರಕರಣ ಹೆಚ್ಚಳ- ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಹೈ ವೋಲ್ಟೇಜ್ ಮೀಟಿಂಗ್
ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿಯೊಳಗೆ ಇಬ್ಬರು ಮಕ್ಕಳು ಸೇರಿದಂತೆ 16 ಜನ ಪ್ರಯಾಣಿಸುತ್ತಿದ್ದರು. ಈತ್ತ ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಹೀಗೆ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಟಿಟಿ ನಜ್ಜು- ಗುಜ್ಜಾಗಿದ್ದು, ಇಬ್ಬರು ಸಿಲುಕಿಕೊಂಡಿದ್ದರು. ಪ್ರಕರಣ ಕುರಿತು ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ- ಮಲೆನಾಡಿನ ಜನರ ಜೀವನ ಅಸ್ತವ್ಯಸ್ತ

