ತುಮಕೂರು : ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿಯ ಸೀಬಿ ಅರಣ್ಯ ಪ್ರದೇಶಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಬೆಂಗಳೂರು- ಪುಣೆ ಹೆದ್ದಾರಿಯಾ ಪಕ್ಕದಲ್ಲಿ ಇರುವ, ಈ ಅರಣ್ಯ ಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ ಹೀಗಾಗಿ ಅರಣ್ಯ ಸಿಬ್ಬಂದಿ ಸೂಕ್ತ ಕಟ್ಟೆಚ್ಚರದಿಂದ ಇರಬೇಕು ಎಂದು ನಿರ್ದೇಶನ ನೀಡಿದರು,,
ಸೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಲು ಹಾಗೂ, ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿಯನ್ನು ಕಬಳಿಸಲು, ಕಾನೂನು ರೀತಿಯ ಕಠಿಣ ಕ್ರಮ ಕೈಗೊಂಡು ಅಮೂಲ್ಯವಾದ, ಅರಣ್ಯ ಭೂಮಿಯನ್ನು ಸಂರಕ್ಷಿಸುವಂತೆ ಅರಣ್ಯ ಜೀವಿಶಾಸ್ತ್ರ,ಮತ್ತು ಪರಿಸರ ಸಚಿವ, ಈಶ್ವರ್ ಬಿ ಖಂಡ್ರೆ ಸ್ಪಷ್ಟನೆ ನೀಡಿದರು,,
ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ, ಸುಪ್ರೀಂ ಕೋರ್ಟ್ ಡಿನೋಟಿಫಿಕೇಶನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ ಎಂದು ಹೇಳಿದರಲ್ಲದೆ, ಡಿನೋಟಿಫಿಕೇಶನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದು ಪಡಿಸುವಂತೆ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾವೆ ಓಡುವಂತೆ ಅಧಿಕಾರಿಗಳಿಗೆ ಸೂಚಿಸಿದರು,,
ಭೂ ಮಾಫಿಯಾ ದವರು ಬಡವರನ್ನು ಮುಂದಿಟ್ಟುಕೊಂಡು ಬೆಲೆ ಬಾಳುವ ಭೂಮಿ ಕಬಳಿಸಲು ಯತ್ತಿಸುತ್ತಿದ್ದಾರೆ, ಅರಣ್ಯ ಭೂಮಿಯನ್ನು ಕಬಳಿಸಲು ಯತ್ನಿಸುವವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ,,
ಪ್ರಕೃತಿ ಪರಿಸರ ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಮ್ಮ ಸಂವಿಧಾನ ಸಾರುತ್ತದೆ, ಸರ್ವಾನ್ನತ ನ್ಯಾಯಾಲಯ ಕೂಡ ಹಲವು ಪ್ರಕರಣಗಳಲ್ಲಿ ಇದನ್ನೇ ಪುನರ್ರಚಿಸಿದೆ, ಹೀಗಾಗಿ ಅರಣ್ಯ ಸಂರಕ್ಷಣೆಯ ಹೊಣೆ ಪ್ರಯತ್ನ ಮಾಡಬೇಕು ಎಂದು ಅವರು ತಿಳಿಸಿದರು,,
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ ಬಿ, ಜಯಚಂದ್ರ ಅವರು, ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂ ಮಾಫಿಯಾದ ಪಾಲಾಗದಂತೆ, ಉಳಿಸಲು ಎಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆಯನ್ನು ನೀಡಿದರು,,
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ಮುಕುಂದರಾಜ್, ವಕೀಲರಾದ ಸೂರ್ಯ ಹಾಗೂ ಉಪಸ್ಥಿತರಿದ್ದರು,,,
ವರದಿ: ನರಸಿಂಹರಾಜು

