ಹಾಸನ: ಭೀಕರ ಬರಗಾಲ ಹಿನ್ನಲೆಯಲ್ಲಿ ಜಿಲ್ಲೆಯ ಅರಕಲಗೂಡು (Arakalagudu) ತಾಲೂಕಿನ ಬಸವನಹಳ್ಳಿ (Basavanahalli) ಕರೆ ಒಣಗಿದೆ. ಖಾಲಿಯಾದ ಕರೆಯ ಒಂದು ಬದಿ ನಿಂತಿದ್ದ ಕೆಸರಿನಲ್ಲಿನ ಮೀನುಗಳನ್ನು (Fishes) ಹಿಡಿದು ಗ್ರಾಮಸ್ಥರು ಅಡುಗೆ (Food) ಮಾಡಿ ಊಟ ಮಾಡಿದ್ದಾರೆ. ಇದರಿಂದ ಇಬ್ಬರು ಮೃತಪಟ್ಟಿದ್ದು. 15ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.
ಬಸವಹಳ್ಳಿ ಗ್ರಾಮದ ರವಿಕುಮಾರ್ (46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಅಸ್ವಸ್ಥರನ್ನು ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್ಡಿ ರೇವಣ್ಣ
ಗ್ರಾಮಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಸವನಹಳ್ಳಿ ಗ್ರಾಮದ ಕೆರೆ ನೀರಿಲ್ಲದೆ ಬತ್ತಿ ಹೋಗಿದೆ. ಖಾಲಿಯಾಗಿದ್ದ ಕೆರೆಯ ಕೆಸರಿನಲ್ಲಿದ್ದ ಮೀನುಗಳನ್ನ ಹಿಡಿದ್ದಾರೆ. ಬಳಿಕ ಮೀನು ಅಡುಗೆ ಮಾಡಿ ಊಟ ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ದೇಶದಲ್ಲಿದ್ದರೂ ಪ್ರಜ್ವಲ್ ರೇವಣ್ಣನ್ನು ಹಿಡಿದು ತರುತ್ತೆವೆ: ಸಿದ್ದರಾಮಯ್ಯ

ಉಟ ಮಾಡಿದ ನಂತರ ವಾಂತಿ ಬೇಧಿಯಿಂದ ಬಳಲಿ 15ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಮೃತ ಪುಟ್ಟಮ್ಮ ಬಸವನಹಳ್ಳಿ ಗ್ರಾಮದಲ್ಲಿರುವ ತವರು ಮನೆಗೆ ಬಂದಿದ್ದರು. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್
ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೊನೆಗೂ ‘ಬೆಂದ’ಕಾಳೂರಿಗೆ ತಂಪನ್ನೇರೆದ ವರುಣಾ…! ನಿನ್ನೆ ಸಂಜೆ ಸುಮಾರು 3 ಗಂಟೆಗಳ ಕಾಲ ಮಳೆ
