ಶಿವಮೊಗ್ಗ: ಡೆತ್ನೋಟ್ನಲ್ಲಿ (DeathNote) ಮೂವರು ಅಧಿಕಾರಿಗಳ ಹೆಸರು ಉಲ್ಲೇಖಿಸಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (Karnataka Valmiki Nigama) ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ (Shivamogga) ವಿನೋಬನಗರದಲ್ಲಿ ನಡೆದಿದೆ.
ವಿನೋಬನಗರದ ಕೆಂಚಪ್ಪ ಬಡಾವಣೆಯ ನಿವಾಸಿ ಚಂದ್ರಶೇಖರನ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಚಂದ್ರಶೇಖರನ್ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರನ್ ಬೆಂಗಳೂರಿನ ಕಚೇರಿಯಲ್ಲಿ ( Bengaluru Office) ಕೆಲಸ ನಿರ್ವಹಿಸುತ್ತಿದ್ದರು. ಅವಮಾನ ಸಹಿಸದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕರಿಂದ ನಮಾಜ್- ವೀಡಿಯೋ ವೈರಲ್
ಅಲ್ಲದೇ ಡೆತ್ನೋಟ್ನಲ್ಲಿ ಮೂವರು ಅಧಿಕಾರಿಗಳ ಹೆಸರನ್ನೂ ಉಲ್ಲೇಖಿಸಿ, ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ ಬಿಚ್ಚಿಟ್ಟಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿದ್ಧಾಂತ್ ಚತುರ್ವೇದಿ ಜೊತೆ ತೃಪ್ತಿ ದಿಮ್ರಿ ರೊಮ್ಯಾನ್ಸ್
ಡೆತ್ ನೋಟ್ನಲ್ಲೇನಿದೆ.?
ನನ್ನ ಸಾವಿಗೆ ನಿಗಮದ ಅಧಿಕಾರಿಗಳು ಕಾರಣ. ನಿಗಮದ ವ್ಯವಸ್ಥಾಪಕ ನಿದೇರ್ಶಕರಾದ ಜೆ.ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ.ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ. ಈ ಅವ್ಯವಹಾರದಲ್ಲಿ ನನ್ನ ಪಾತ್ರವಿಲ್ಲ. ಆದರೆ ಕೆಲಸದ ಒತ್ತಡದಲ್ಲಿ ಸದರಿ ಖಾತೆಯ ಚೆಕ್ ಪುಸ್ತಕ ಪಡೆಯದಿರುವುದು ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು ನನ್ನ ತಪ್ಪಾಗಿದೆ. ಈ ಹಗರಣದಲ್ಲಿ ನಾನು ಕಾರಣ ನಲ್ಲ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತೆ ಸಾವು
ಸದ್ಯ ಘಟನಾ ಸ್ಥಳಕ್ಕೆ ಶಾಸಕ ಎಸ್.ಎನ್ ಚನ್ನಬಸಪ್ಪ ಭೇಟಿ ನೀಡಿದ್ದು, ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಮುಂದುವರಿದ ರೇವಣ್ಣರ ಟೇಂಪಲ್ ರನ್; ಧರ್ಮಸ್ಥಳದ ಮಂಜುನಾಥನಿಗೆ ವಿಶೇಷ ಪೂಜೆ

