ಇಸ್ಲಾಮಾಬಾದ್: ನಾವು ಭಾರತದ (India) ಜೊತೆಗಿದ್ದೇವೆ. ಪಾಕಿಸ್ತಾನ ಯಾವಾಗಲೂ ಉತ್ತಮ ನೆರೆಹೊರೆ ಸಂಬಂಧಗಳನ್ನು ಬಯಸುತ್ತದೆ ಎಂದು ಪಾಕಿಸ್ತಾನದ (Pakistan) ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ (Ishaq Dar) ಹೇಳಿದ್ದಾರೆ.
ಇಶಾಕ್ ದಾರ್ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಪಾಕಿಸ್ತಾನವು ಯಾವಾಗಲೂ ಭಾರತದೊಂದಿಗೆ (India) ಉತ್ತಮ ಸಂಬಂಧವನ್ನು ಹೊಂದಲು ಉತ್ಸುಕವಾಗಿದೆ. ಭಾರತದೊಂದಿಗಿನ ಸಂಬಂಧದ ಬಗ್ಗೆ ತಮ್ಮ ಹಿಂದಿನ ಹೇಳಿಕೆಗಳನ್ನು ಪುನರುಚ್ಚರಿಸಿದರು.
ಸದ್ಯ ಭಾರತಸದೊಂದಿಗಿನ ನಮ್ಮ ಸಂಬಂಧವು ಕಳಪೆಯಾಗಿದೆ. ಆದರೆ ಪಾಕಿಸ್ತಾನವು ಶಾಶ್ವತ ಹಗೆತನವನ್ನು ಬಯಸುವುದಿಲ್ಲ. ಪರಸ್ಪರ ಗೌರವ, ಸಾರ್ವಭೌಮ ಸಮಾನತೆ ಮತ್ತು ದೀರ್ಘಕಾಲದ ಜಮ್ಮು ಮತ್ತು ಕಾಶ್ಮೀರ ವಿವಾದದ ನ್ಯಾಯಯುತ ಮತ್ತು ಶಾಂತಿಯುತ ಪರಿಹಾರದ ಆಧಾರದ ಮೇಲೆ ನಾವು ಭಾರತದೊಂದಿಗೆ ಉತ್ತಮ ನೆರೆಯ ಸಂಬಂಧಗಳನ್ನು ಬಯಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಎದುರಾಯ್ತು ಮತ್ತೊಂದು ಕಂಟಕ- ಜಾಗ ಮೇಲೆ ಭೂಗಳ್ಳರ ಕಣ್ಣು

ದಕ್ಷಿಣ ಏಷ್ಯಾ ಈ ಪ್ರದೇಶವು ಬಡತನ, ನಿರುದ್ಯೋಗ, ಅನಕ್ಷರತೆ, ರೋಗ, ಆಹಾರ ಅಭದ್ರತೆ, ನೀರಿನ ಕೊರತೆ, ನೈಸರ್ಗಿಕ ವಿಕೋಪಗಳು, ಪರಿಸರ ಅವನತಿ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳು ಸೇರಿದಂತೆ ಬೆದರಿಸುವ ಸವಾಲುಗಳಿಂದ ಸುತ್ತುವರೆದಿದೆ. ಎಲ್ಲಾ ದೇಶಗಳೊಂದಿಗೆ ಶಾಂತಿಯುತ, ಸಹಕಾರಿ ಮತ್ತು ಉತ್ತಮ-ನೆರೆಹೊರೆಯ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪಾಕಿಸ್ತಾನ ಸತತವಾಗಿ ಶ್ರಮಿಸುತ್ತಿದೆ ಎಂದು ದಾರ್ ಹೇಳಿದ್ದಾರೆ. ಕೆಲವು ಸಂದರ್ಭಗಳಲ್ಲಿ ಸವಾಲುಗಳು ಮತ್ತು ಹಿನ್ನಡೆಗಳ ಹೊರತಾಗಿಯೂ, ಪಾಕಿಸ್ತಾನದ ನಿರ್ಧಾರ ಸ್ಥಿರವಾಗಿರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮಂಗಾರು ಮಳೆಯಿಂದಾಗಿ ಕೆಆರ್ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ
ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿದ್ದಾರೆ. ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯ ನಂತರ ಎನ್ಡಿಎ ಸಂಪೂರ್ಣ ಬಹುಮತ ಪಡೆದಿದೆ. ಮೋದಿ ಪ್ರಧಾನಿಯಾದ ನಂತರ ವಿಶ್ವದಾದ್ಯಂತದ ನಾಯಕರು ಅಭಿನಂದನಾ ಸಂದೇಶಗಳನ್ನು ನೀಡಿದರು. ಇದನ್ನೂ ಓದಿ: ಸಂಸದರಾಗಿ ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು ರಾಹುಲ್ ಗಾಂಧಿ ಪ್ರಮಾಣ ವಚನ ಸ್ವೀಕಾರ


