ಬಾಗಲಕೋಟೆಯಲ್ಲಿ ಗೃಹ ಸಚಿವರಾದ ಜಿ ಪರಮೇಶ್ವರ್ ಅವರು ಸ್ಟೇಜ್ ಮೇಲೆ ಹಾಸ್ಯ ಚಟಾಕಿ ಸಿಡಿಸಿ ಸಭೆಯಲ್ಲಿ ಸೇರಿದವರನ್ನು ನಗುವಂತೆ ಮಾಡಿದ್ದಾರೆ. ಹೌದು ಇತ್ತೀಚಿಗೆ ಸರಕಾರದಲ್ಲಿ ಏನು ನಡೆಯುತ್ತಿದೆ ಅನ್ನೂದು ತಿಳಿಯದಾಗಿದೆ ಯಾಕೆಂದರೆ ತಮ್ಮ ತಮ್ಮ ಪಕ್ಷದ ವಿರುದ್ಧವೇ ಪಕ್ಷದ ನಾಯಕರು ಒಂದೊಂದೇ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ .
ಮೊನ್ನೆ ಮೊನ್ನೆಯಷ್ಟೇ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವ್ರು ವಸತಿ ಯೋಜನೆಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಆರೋಪ ಮಾಡಿದ್ದರು . ಇನ್ನೊಂದು ಕಡೆ ಶಾಸಕ ರಾಜು ಕಾಗೆ ಅವರು ಅನುದಾನದ ವಿಚಾರವಾಗಿ ಅಸಮಧಾನ ವ್ಯಕ್ತಪಡಿಸಿದ್ದರು ..
ಈಗ ಇದರ ಬೆನ್ನಲ್ಲೇ ಗೃಹ ಸಚಿವ ಡಾ. ಜಿ ಪರಮೇಶ್ವರ ಅವ್ರು ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ಅದೇನಂದರೆ ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ.
ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ, ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಹೇಳಿ ಹಾಸ್ಯ ಚಟಾಕಿ ಸಿಡಿಸಿದ್ದಾರೆ.’
- ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
- ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
- ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
- ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
- ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

