ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದ ಬೆನ್ನಲ್ಲೇ ಇತ್ತ ಪತ್ನಿ ವಿಜಯಲಕ್ಷ್ಮಿಯವರು (Vijayalakshmi) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಇನ್ಸ್ಟಾದಲ್ಲಿ ಅನ್ಫಾಲೋ ಮಾಡಿದ್ದಾರೆ.
ಅನ್ಫಾಲೋ ಜೊತೆಗೆ ತಮ್ಮ ಇನ್ಸ್ಟಾ ಖಾತೆಯ ಡಿಪಿಯನ್ನು ಕೂಡ ಡಿಲೀಟ್ ಮಾಡಿದ್ದಾರೆ. ಪವಿತ್ರಾ ವಿಚಾರದಲ್ಲಿ ದರ್ಶನ್ (Challenging Star Darshan) ಆಗಾಗ ಎಡವಟ್ಟುಗಳನ್ನು ಮಾಡಿಕೊಳ್ಳುತ್ತಾನೇ ಇರುತ್ತಾರೆ. ಈ ಬಾರಿಯೂ ಪವಿತ್ರಾ ವಿಚಾರವಾಗಿಯೇ ಘನಘೋರ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿಯವರಿಗೆ ಸಹಜವಾಗಿಯೇ ಪವಿತ್ರಾ ಗೌಡ ಮೇಲೆ ಕೆಟ್ಟ ಕೋಪ ಬಂದಿರುತ್ತದೆ. ಆದರೂ ತಾಳ್ಮೆ ವಹಿಸಿಕೊಂಡು ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಜೂನ್ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

ಕಳೆದ ಎರಡ್ಮೂರು ತಿಂಗಳ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿಯರು ಇನ್ ಸ್ಟಾದಲ್ಲಿ ಪವಿತ್ರಾ ಗೌಡ (Pavithra Gowda) ಪತಿ ಹಾಗೂ ಮಗಳ ಬಗ್ಗೆ ಫೋಟೋಗಳನ್ನು ಶೇರ್ ಮಾಡಿ ಮಾತಿನ ದಾಳಿ ನಡೆಸಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳಲ್ಲೇ ಎರಡು ಬಣವಾಯ್ತು. ದರ್ಶನ್ ವಿಜಯಲಕ್ಷ್ಮಿ ದಂಪತಿ ಇಷ್ಟಪಡುವ ಫ್ಯಾನ್ಸ್, ದರ್ಶನ್ ರ ಎರಡೂ ಸಂಸಾರವನ್ನು ಇಷ್ಟಪಡುವ ಫ್ಯಾನ್ಸ್. ಇನ್ನು ದರ್ಶನ್ ಅಭಿಮಾನಿಯೇ ಆಗಿದ್ದ ರೇಣುಕಾಸ್ವಾಮಿಯವರು ವಿಜಯಲಕ್ಷ್ಮಿ ದರ್ಶನ್ ರನ್ನು ಇಷ್ಟಪಡುತ್ತಿದ್ದರು. ಹೀಗಾಗಿ ಪವಿತ್ರಾ ಗೌಡ ಪೋಸ್ಟ್ ಗೆ ಬೇಸರದಿಂದ ಕಾಮೆಂಟ್ ಮಾಡುತ್ತಿದ್ದರು. ಇದೀಗ ರೇಣುಕಾಸ್ವಾಮಿ ಕೊಲೆ ಬಳಿಕ ಫೋನ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ನಕಲಿ ಖಾತೆ ತೆರೆದಿದ್ದ ಆರೋಪಿ ಬಂಧನ, 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯು (Renukaswamy) ತನ್ನ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಮಾಡಿದನೆಂದು ಸಿಟ್ಟಿಗೆದ್ದು ದರ್ಶನ್ ಹಾಗೂ ಗ್ಯಾಂಗ್ ಆತನನ್ನು ಕಿಡ್ನಾಪ್ ಮಾಡಿ ಬೆಂಗಳೂರಿನಲ್ಲಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದೆ. ಬಳಿಕ ಮೃತದೇಹವನ್ನು ಮೋರಿಗೆ ಎಸೆಯಲಾಗಿದೆ. ಪ್ರಕರಣ ಸಂಬಂಧ ಇದೀಗ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 13 ಮಂದಿಯನ್ನು ಪೊಲೀಸರು ಬಂಧಿಸಿದ್ದು, 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದನ್ನೂ ಓದಿ: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರ

