ಕಾರ್ಕಳ : ಯುವತಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಅಲ್ತಾಫ್ ಹಾಗೂ ಸುಧೀರ್ ಬಂಧಿತ ಆರೋಪಿಗಳಾಗಿದ್ದು, ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.
ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಗೆ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿತ್ತು ಎನ್ನಲಾಗಿದ್ದು, ಶುಕ್ರವಾರ ತನ್ನನ್ನ ಭೇಟಿಯಾಗುವಂತೆ ನೊಂದ ಯುವತಿಗೆ ಅಲ್ತಾಫ್ ಕರೆ ಮಾಡಿ ಹೇಳಿದ್ದ.
ಸಂತ್ರಸ್ತೆ ಅಲ್ಲಿಗೆ ತೆರಳಿದ ವೇಳೆ ಆಕೆಯನ್ನು ಅಪಹರಿಸಲಾಗಿದೆ. ಬಳಿಕ ಮತ್ತು ಬರುವ ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

