ದಾವಣಗೆರೆ: ಆನ್ಲೈನ್ ಗೇಮ್ನಲ್ಲಿ ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25) ಎಂದು ಗುರುತಿಸಲಾಗಿದೆ.
ಯುವಕ ಆನ್ಲೈನ್ ಗೇಮ್ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ನೊಂದು ಆನ್ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ. ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ನೋಟ್ನಲ್ಲಿ ಗೇಮ್ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ನನ್ನಂತೆ ಹಣ ಕಳೆದುಕೊಂಡು ನೋವು ಅನುಭವಿಸುವುದು ಕಡಿಮೆಯಾಗಲಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ. ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

